ಕನ್ನಡಪ್ರಭ ವಾರ್ತೆ ತರೀಕೆರೆ
ಮಂಗಳವಾರ ಪಟ್ಟಣದ ಪುರಸಭೆಗೆ ನೂತನವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ವಸಂತಕುಮಾರ್ ಹಾಗೂ ಗಿರಿಜಾ ಪ್ರಕಾಶ್ ವರ್ಮ ಅವರ ಅಭಿನಂಧನಾ ಸಮಾರಂಭದಲ್ಲಿ ಮಾತನಾಡಿದರು.ತರೀಕೆರೆ ಪುರಸಭೆಗೆ ಸರ್ಕಾರದಿಂದ 5 ಕೋಟಿ ರು. ಅನುದಾನವನ್ನು ತರಲಾಗಿದೆ. ಪಟ್ಟಣದ ಒಳಚರಂಡಿ ಯೋಜನೆಗೆ 34ಕೋಟಿ ನೀಡಲಾಗಿದೆ. ₹30 ಕೋಟಿಯಲ್ಲಿ ಪಟ್ಟಣದ ಬಿ.ಎಚ್.ರಸ್ತೆ ಅಭಿವೃದ್ದಿ ಪಡಿಸಲಾಗುವುದು.
₹40 ಲಕ್ಷ ವೆಚ್ಚದಲ್ಲಿ ಪಟ್ಟಣದಲ್ಲಿ ಫುಡ್ ಕೋರ್ಟ್ ನಿರ್ಮಾಣ ಮತ್ತು ಪಟ್ಟಣದ ಬಸ್ ನಿಲ್ದಾಣಗಳ ಅಭಿವೃದ್ಧಿ, ಅಮೃತ್ ಯೋಜನೆಯಡಿ ರೈಲ್ವೆ ನಿಲ್ಣಾಣ ಅಭಿವೃದ್ಧಿ ಪಡಿಸಲಾಗುವುದು ಎಂದು ಅವರು ಹೇಳಿದರು.ಪುರಸಭಾ ಸದಸ್ಯ ಟಿ.ಎಂ.ಬೋಜರಾಜ್ ಮಾತನಾಡಿ, ಈ ಬಾರಿ ಹೆಚ್ಚಿನ ಮಳೆ ಸುರಿದ ಪರಿಣಾಮ ಪಟ್ಟಣದಲ್ಲಿ ಅನೇಕ ಮನೆಗಳಿಗೆ ಹಾನಿಯಾಗಿದೆ. ನೂತನ ಪುರಸಭಾ ಅಧ್ಯಕ್ಷರಾದ ವಸಂತಕುಮಾರ್ ಅವರು ತಕ್ಷಣ ಸ್ಥಳಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಪರಿಹಾರ ಒದಗಿಸಿಬೇಕು. ಅತಿವೃಷ್ಟಿಯಿಂದಾಗಿ ಪಟ್ಟಣದ ರಸ್ತೆಗಳು ಹಾಳಾಗಿದೆ, ಶಾಲೆಗಳು ಅಂಗನವಾಡಿ ಕೇಂದ್ರಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಪುರಸಭೆ ನೂತನ ಅದ್ಯಕ್ಷ ವಸಂತಕುಮಾರ್ ಮತ್ತು ನೂತನ ಉಪಾಧ್ಯಕ್ಷೆ ಗಿರಿಜಾ ಪ್ರಶಾಕ್ ವರ್ಮ ಮಾತನಾಡಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾಗಲು ಸಹಕರಿಸಿದ ಎಲ್ಲರಿಗೂ ಅಭಿನಂದನೆ ತಿಳಿಸಿದರು.