ವಿಶ್ವ ಮಾತೃಭಾಷೆ ದಿನ । ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಆಯೋಜನೆ
ಕಡ್ಡಾಯವಾಗಿ ಎಲ್ಲಾ ಕಛೇರಿಗಳಲ್ಲೂ ಕನ್ನಡ ಭಾಷೆ ಬಳಸಬೇಕು. ಎಲ್ಲರೂ ಕನ್ನಡದಲ್ಲಿ ಮಾತನಾಡುವುದನ್ನು ಕಲಿಯಬೇಕು. ಕನ್ನಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ತಹಸೀಲ್ದಾರ್ ಪರುಸಪ್ಪ ಕುರುಬರ ಹೇಳಿದರು.
ನಗರದ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಈ ಬಾರಿ ಸಹ ಹಳೇನಗರದ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಮಾತೃಭಾಷೆ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ಉರ್ದು ಶಾಲೆಯಲ್ಲಿ ವಿಶೇಷವಾಗಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಿಸಿಕೊಂಡು ಬರುತ್ತಿರುವುದು ತುಂಬಾ ಸಂತೋಷದ ವಿಷಯವಾಗಿದೆ. ನಮ್ಮ ಮಾತೃ ಭಾಷೆಯಾದ ಕನ್ನಡ ನಾವೆಲ್ಲರೂ ಸರಿಯಾಗಿ ಅರ್ಥಮಾಡಿಕೊಂಡು ಕಲಿಯುವ ಮೂಲಕ ಇತರರಿಗೂ ಕಲಿಸಬೇಕೆಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಶಾಲೆಯ ಮುಖ್ಯ ಶಿಕ್ಷಕಿ ಶಹನ ಫಾತೀಮ ಸೇರಿ ಇತರರು ಮಾತನಾಡಿದರು. ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯ ಖಜಾಂಚಿ ಗಂಗರಾಜ್, ಮಲ್ಲಿಕಾ, ಕೋಕಿಲ, ಸುಚಿತ್ರ ಸೇರಿದಂತೆ ಶಾಲೆಯ ಶಿಕ್ಷಕ ಹಾಗು ಸಿಬ್ಬಂದಿ ಪಾಲ್ಗೊಂಡಿದ್ದರು.