ಕನ್ನಡಪ್ರಭ ವಾರ್ತೆ ತುಮಕೂರು
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳಿಗೆ ಆಟದ ಮೈದಾನ ಇರಬೇಕು. ಅಂಗನವಾಡಿ ಪಕ್ಕದಲ್ಲಿ ಖಾಸಗಿ ಶೌಚಾಲಯಗಳನ್ನು ಕಟ್ಟಬಾರದು ಎಂದು ಸೂಚಿಸಿದರು.
ಪೋಷಕರು ಮಕ್ಕಳನ್ನು ಭಿಕ್ಷಾಟನೆಗೆ ಕಳುಹಿಸುವುದು ತಪ್ಪು. ಭಿಕ್ಷಾಟನೆ ತಡೆಯುವ ನಿಟ್ಟಿನಲ್ಲಿ ಇಲಾಖೆ ಅಧಿಕಾರಿ/ಸಿಬ್ಬಂದಿ ಪ್ರಮುಖ ವೃತ್ತಗಳು, ರೈಲ್ವೇ/ಬಸ್ ನಿಲ್ದಾಣಗಳು, ಮತ್ತಿತರ ಸ್ಥಳಗಳಲ್ಲಿ ಪರಿಶೀಲಿಸಬೇಕು. ಅಲ್ಲದೆ ಬಾಲ್ಯ ವಿವಾಹ ಮಾಡುವವರ ಮೇಲೆ ದೂರು ದಾಖಲಿಸಿ ಅಂತಹವರನ್ನು ಶಿಕ್ಷೆಗೆ ಗುರಿಪಡಿಸಬೇಕು. ಮೈತ್ರಿ ಯೋಜನೆ ಕುರಿತಂತೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಮಾತನಾಡಿ, ಬಾಣಂತಿಯರಿಗೆ ಎಲ್ಲಾ ಸೌಲಭ್ಯಗಳು ಸಿಗುತ್ತಿವೆಯೇ ಎಂದು ಅಧಿಕಾರಿಗಳು ಪ್ರತಿ ತಿಂಗಳು ಪರಿಶೀಲಿಸಿ ಅದರ ಮಾಹಿತಿ ನೀಡಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಬಾರದಂತೆ ನೋಡಿಕೊಳ್ಳಬೇಕು. ಮೈತ್ರಿ ಯೋಜನೆಯ ಬಗ್ಗೆ ಮಾಹಿತಿ ಇಲ್ಲದೆ ಯಾವುದೇ ಉಪಯೋಗವಾಗುತ್ತಿಲ್ಲ. ಆದ್ದರಿಂದ ಈ ಯೋಜನೆಯ ಮಾಹಿತಿ ನೀಡಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.