ಹೊಸಕೋಟೆ: ನಗರದ ಹೃದಯಭಾಗದಲ್ಲಿ ಶ್ರೀ ರೇಣುಕಾಚಾರ್ಯರ ದೇವಾಲಯ ನಿರ್ಮಾಣಕ್ಕೆ ಸರ್ಕಾರದಿಂದ ಜಾಗ ಮಂಜೂರು ಮಾಡಿಸಿಕೊಡಬೇಕು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ತಿಳಿಸಿದರು.
ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ವೀರಶೈವ ಲಿಂಗಾಯತ ಮಠಗಳ ಪರಂಪರೆಯಿಂದ ಇಂದು ಜಾತಿಬೇದವಿಲ್ಲದೆ ಲಕ್ಷಾಂತರ ಮಕ್ಕಳಿಗೆ ತ್ರಿವಿಧ ದಾಸೋಹ ನಡೆಯುತ್ತಿದೆ. ಈ ಕಾರ್ಯ ಕೇವಲ ಮಠಗಳಿಂದ ಮಾತ್ರ ಸಾಧ್ಯ. ದಾಸೋಹ ಶುರು ಮಾಡಿದ್ದೇ ಮಠಗಳು, ಧರ್ಮ, ಜಾತಿ ಲಿಂಗಭೇದವಿಲ್ಲದೆ ಎಲ್ಲರನ್ನೂ ಸಮಾನವಾಗಿ ನೋಡುವ ಧರ್ಮ ಎಂದರೆ ಅದು ವೀರಶೈವ ಲಿಂಗಾಯತ ಧರ್ಮ ಎಂದರು.
ನಾಗಲಾಪುರ ವೀರಸಿಂಹಾಸನ ಮಠದ ಶ್ರೀ ತೇಜೇಶಲಿಂಗ ಶಿವಾಚರ್ಯ ಸ್ವಾಮೀಜಿ, ಬಾಳೆಹೊನ್ನೂರು ಶಾಖಾ ಮಠದ ಶ್ರೀ ರೇಣುಕಾಚಾರ್ಯ ಸ್ವಾಮೀಜಿ, ರಾಜಾಪುರ ಸಂಸ್ಥಾನ ಮಠದ ಶ್ರೀ ಡಾ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಬೆಳ್ಳಾವಿ ಮಠದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿ, ಗುಮ್ಮಳಾಪುರ ಸಂಸ್ಥಾನ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ಎಲ್ಲಾ ಸಂಘಟನೆಗಳ ಪದಾಧಿಕಾರಿಗಳು ಹಾಜರಿದ್ದರು.ಫೋಟೋ: 4 ಹೆಚ್ಎಸ್ಕೆ 2
ಹೊಸಕೋಟೆಯಲ್ಲಿ ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ ಸಂಧರ್ಭದಲ್ಲಿ ಹಮ್ಮಿಕೊಳ್ಳಲಾಗಿದ್ದ ಧರ್ಮ ಜಾಗೃತಿ ಸಮಾವೇಶವನ್ನು ಗಣ್ಯರು ಉದ್ಘಾಟಿಸಿದರು.