ಹೊಸಪೇಟೆ: ವಿಧಾನಸಭೆ ಚುನಾವಣೆಯಲ್ಲಿ ನನಗೆ ಹಿನ್ನಡೆಯಾಗಿದೆ. ಆದರೆ, ಪ್ರಧಾನಿ ಮೋದಿ ಈ ಬಾರಿ ಬಳ್ಳಾರಿ ಲೋಕಸಭೆ ಟಿಕೆಟ್ ನೀಡಿದ್ದಾರೆ. ನೀವೆಲ್ಲರೂ ಸೇರಿ ಶ್ರೀರಾಮುಲು ಅವರಿಗೆ ಮತ್ತೆ ರಾಜಕೀಯ ಪುನರ್ಜನ್ಮ ನೀಡಬೇಕು ಎಂದು ಬಿಜೆಪಿ ಲೋಕಸಭಾ ಅಭ್ಯರ್ಥಿ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು.
ಇಡೀ ವಿಶ್ವದಲ್ಲಿ ದೇಶವನ್ನು ಬಲಿಷ್ಠ ರಾಷ್ಟ್ರ ಮಾಡಿರುವ ಪ್ರಧಾನಿ ಮೋದಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿಸಲು ಬಳ್ಳಾರಿ ಲೋಕಸಭೆಯಿಂದ ಬಿಜೆಪಿ ಗೆಲ್ಲಿಸಬೇಕು ಎಂದು ಬಿಜೆಪಿ ಲೋಕಸಭಾ ಅಭ್ಯರ್ಥಿ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು.
ಪ್ರಧಾನಿ ಮೋದಿ ಅವರ ಅಲೆ ಇಡೀ ದೇಶದಲ್ಲಿದೆ. ಇಡೀ ಜಗತ್ತೆ ಅವರನ್ನು ಕೊಂಡಾಡುತ್ತಿದೆ. ಆದರೆ, ಕಾಂಗ್ರೆಸ್ ಹಾಗೂ ಅವರ ಇಂಡಿಯಾ ಒಕ್ಕೂಟದ ಪಕ್ಷಗಳು ರಾಜಕೀಯ ಕಾರಣಕ್ಕಾಗಿ ವಿರೋಧ ವ್ಯಕ್ತಪಡಿಸುತ್ತಿವೆ. ಇಡೀ ದೇಶಕ್ಕೆ ಮೋದಿಯೇ ಗ್ಯಾರಂಟಿಯಾಗಿದ್ದಾರೆ. ದೇಶವನ್ನು ಸುರಕ್ಷಿತವಾಗಿಟ್ಟಿದ್ದಾರೆ. ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕಾಗಿ ಮತ್ತೊಮ್ಮೆ ಮೋದಿ ಗೆಲ್ಲಿಸಬೇಕು. ಈಗ ನಾವು ಶ್ರೀಮಂತಿಕೆಯಲ್ಲಿ ವಿಶ್ವದಲ್ಲೇ ಐದನೇ ಸ್ಥಾನದಲ್ಲಿದ್ದೇವೆ. ನಾವು ಮೂರನೇ ಸ್ಥಾನಕ್ಕೆ ಬರಬೇಕು ಎಂದರು.ಬಿಜೆಪಿ ಮುಖಂಡ ಸಿದ್ದಾರ್ಥ ಸಿಂಗ್, ಮುಖಂಡರಾದ ಗೋಸಲ ಭರಮಪ್ಪ, ಜಂಬಾನಹಳ್ಳಿ ರಾಮಣ್ಣ, ತಾರಿಹಳ್ಳಿ ಜಂಬುನಾಥ, ಜಂಬಯ್ಯ ನಾಯಕ, ಮಾರ್ಕಂಡೇಯ ಮತ್ತಿತರರಿದ್ದರು.