- ಫಲಾನುಭವಿಗಳಿಗೆ ಜೇನು ಸಾಕಣೆ ಪೆಟ್ಟಿಗೆಗಳ ವಿತರಿಸಿ ಶಾಸಕ ಬಸವರಾಜು - - - ಕನ್ನಡಪ್ರಭ ವಾರ್ತೆ ಚನ್ನಗಿರಿ
ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಜೇನುಕೃಷಿ ತರಬೇತಿ ಮತ್ತು ಪರಂಪರಾಗತ ಕೃಷಿ ವಿಕಾಸ ಯೋಜನೆಯಲ್ಲಿ 99 ಜನ ಪರಿಶಿಷ್ಟ ಜಾತಿ-ಪಂಗಡದ ಫಲಾನುಭವಿಗಳಿಗೆ ಜೇನು ಸಾಕಾಣಿಕಾ ಪೆಟ್ಟಿಗೆಗಳನ್ನು ವಿತರಿಸಿ ಅವರು ಮಾತನಾಡಿದರು.
ಗುಣಮಟ್ಟದ ಜೇನುತುಪ್ಪಕ್ಕೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇದೆ. ಜೇನುಕೃಷಿ ಮಾಡುವ ರೈತರು ತೋಟಗಾರಿಕೆ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಬಳಸಿಕೊಂಡು ಜೇನು ಸಾಕಾಣಿಕೆ ಮಾಡಿ ಆರ್ಥಿಕವಾಗಿ ಸಬಲರಾಗಬೇಕು. ತೋಟಗಾರಿಕ ಬೆಳೆಗಳು ವಾರ್ಷಿಕ ಬೆಳೆಗಳಾಗಿರುತ್ತವೆ. ಇದರ ಜೊತೆಗೆ ಉಪ ಕಸುಬುಗಳನ್ನು ಮಾಡಿಕೊಂಡಾಗ ಮಾತ್ರ ಹೆಚ್ಚಿನ ಆರ್ಥಿಕತೆ ಸಾಧಿಸಬಹುದು ಎಂದು ತಿಳಿಸಿದರು.ಪ್ರತಿಯೊಬ್ಬ ರೈತನಿಗೂ ಕೃಷಿಯಲ್ಲಿ ವಿನೂತನವಾದ ಪ್ರಯೋಗಗಳನ್ನು ಮಾಡಬೇಕೆಂಬ ಬಯಕೆ ಇದೆ. ಆದರೆ, ಆರ್ಥಿಕತೆ ಕೊರತೆಯಿಂದ ಇಂತಹ ಉಪ ಕಸುಬುಗಳನ್ನು ಮಾಡಲು ಹೋಗುವುದಿಲ್ಲ. ಸರ್ಕಾರ ರೈತರ ಆರ್ಥಿಕತೆಯನ್ನು ದ್ವಿಗುಣಗೊಳಿಸುವ ಉದ್ದೇಶದಿಂದ ಇಂತಹ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಬಗ್ಗೆ ಹೆಚ್ಚು ಹೆಚ್ಚು ಪ್ರಚಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
- - -
- ಬಸವರಾಜು ಶಿವಗಂಗಾ, ಶಾಸಕ
ಅರ್ಹ ಪರಿಶಿಷ್ಟ ಜಾತಿ- ಪಂಗಡದ ತೋಟ ಬೆಳೆಗಾರ ಫಲಾನುಭವಿಗಳಿಗೆ ಚನ್ನಗಿರಿ ಕ್ಷೇತ್ರ ಶಾಸಕ ಬಸವರಾಜು ಶಿವಗಂಗಾ ಜೇನು ಸಾಕಾಣಿಕಾ ಪೆಟ್ಟಿಗೆಗಳನ್ನು ವಿತರಿಸಿದರು.