ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿರುವ 36 ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ಸೇರಿದಂತೆ ಒಟ್ಟು 60ಕ್ಕೂ ಅಧಿಕ ಕ್ಷೇತ್ರಗಳಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಬಂಜಾರ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ ಎಂದರು.
ಸಚಿವ ಸಂಪುಟ ವಿಸ್ತರಣೆಯಲ್ಲಿ ಬಂಜಾರ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಿ ಕಾಂಗ್ರೆಸ್ ಪಕ್ಷದ ಏಕೈಕ ಬಂಜಾರ ಸಮುದಾಯದ ಶಾಸಕರು ಹಾಗೂ ಹಾಲಿ ವಿಧಾನಸಭೆಯ ಉಪಸಭಾಪತಿಗಳಾದ ರುದ್ರಪ್ಪ ಲಮಾಣಿ ಅವರಿಗೆ ಕ್ಯಾಬಿನೇಟ್ ದರ್ಜೆ ಸಚಿವ ಸ್ಥಾನ ನೀಡಬೇಕೆಂದು ಸಮಸ್ತ ಬಂಜಾರ ಸಮುದಾಯದ ಪರವಾಗಿ ಆಗ್ರಹಿಸಿದರು.ರುದ್ರಪ್ಪ ಲಮಾಣಿ ಅವರು ಮೂರು ಬಾರಿ ಶಾಸಕರಾಗಿ ಮತ್ತು ಒಂದು ಬಾರಿ ಜವಳಿ ಮತ್ತು ಮುಜರಾಯಿ ಇಲಾಖೆ ಸಚಿವರಾಗಿ ಉತ್ತಮ ಕಾರ್ಯನಿರ್ವಹಿಸಿದ್ದಾರೆ. ಕಾಂಗ್ರೆಸ್ ಪಕ್ಷದ ವರಿಷ್ಠರು ಸಾಮಾಜಿಕ ನ್ಯಾಯದ ಅಡಿಯಲ್ಲಿ ರಾಜ್ಯದ 30 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇರುವ ಬಂಜಾರ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವುದರ ಜೊತೆಗೆ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಕ್ಯಾಬಿನೇಟ್ ದರ್ಜೆಯ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.