ಚನ್ನಗಿರಿ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಎಚ್.ಕೆ.ರಾಮಚಂದ್ರಪ್ಪ ಬಣದ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಕುಂದುಕೊರತೆ ಸಭೆ ಶನಿವಾರ ನಡೆಯಿತು.
ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರನ್ನು ಶೋಷಿಸುತ್ತಿರುವ ಕೆಲ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಹೋರಾಟ ಮಾಡುವುದು ಅನಿವಾರ್ಯವಾಗಿದ್ದು, ಆ ನಿಟ್ಟಿನಲ್ಲಿ ಕೆಲ ಕಾರ್ಮಿಕ ಸಂಘಟನೆಗಳು ನಿಮ್ಮನ್ನು ದುರುಪಯೋಗ ಪಡಿಸಿಕೊಳ್ಳುತ್ತಿವೆ ಎಂದರು.
ಅಂಗನವಾಡಿ ಕಾರ್ಯಕರ್ತೆಯರನ್ನು ಮತ್ತು ಸಹಾಯಕಿಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸದಿದ್ದರೆ ಕಾರ್ಮಿಕ ಕಾಯ್ದೆಗೆ ಒಳಪಡಿಸಿ ಕಾರ್ಮಿಕರಿಗೆ ಸಿಗುವಂತಹ ಸೌಲಭ್ಯಗಳನ್ನು ಕೊಡಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.ಸಭೆಯಲ್ಲಿ ರಾಜ್ಯ ಪದಾಧಿಕಾರಿಗಳಾದ ಶಾರಧಮ್ಮ, ವಿಶಾಲಮ್ಮ, ಜಿಲ್ಲಾ ಸಂಘದ ಅಧ್ಯಕ್ಷ ವಾಸು, ಪ್ರಧಾನ ಕಾರ್ಯದರ್ಶಿ ಸುವರ್ಣಮ್ಮ, ಮಹಮ್ಮದ್ ಭಾಷಾ, ಕಾರ್ಯದರ್ಶಿ ಗಾಯಿತ್ರಮ್ಮ, ತಾಲೂಕು ಅಧ್ಯಕ್ಷೆ ಕಗತೂರು ವಿಮಲಾಕ್ಷ್ಮಿ ಸೇರಿದಂತೆ ತಾಲೂಕಿನ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಭಾಗವಹಿಸಿದ್ದರು.