ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಇಲ್ಲಿನ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಳ್ಳಕೆರೆ ಶಾಸಕ ರಘುಮೂರ್ತಿ ಅವರಿಗೆ ಅವಕಾಶ ಕಲ್ಪಿಸಿರುವುದ ಸ್ವಾಗತಿಸುತ್ತೇವೆ. ಅದೇ ರೀತಿ ಗೋವಿಂದಪ್ಪ ಅವರನ್ನು ಸಚಿವರನ್ನಾಗಿ ಮಾಡಬೇಕೆಂಬುದು ತಮ್ಮ ಆಗ್ರಹವೆಂದರು.
ಕುರುಬ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರದಲ್ಲಿ ಸೂಕ್ತ ಪಾಲು ಹಾಗೂ ಪ್ರಾತಿನಿಧ್ಯ ಸಿಕ್ಕಿಲ್ಲ. ಸಂಪುಟ ವಿಸ್ತರಣೆಯ ಕೊನೆಯ ಕ್ಷಣದವರೆಗೂ ಗಾಯತ್ರಿ ಶಾಂತೇಗೌಡ ಅವರ ಹೆಸರು ಕೇಳಿಬಂದರೂ ಅವರಿಗೆ ಪ್ರಮಾಣವಚನ ಸ್ವೀಕರಿಸಲು ಅವಕಾಶ ಸಿಗಲಿಲ್ಲ. ಇದರಿಂದ ಇಡೀ ಕುರುಬ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗಗಳಲ್ಲಿ ಕುರುಬ ಜನಾಂಗದ ಜನಸಂಖ್ಯೆ ಅತ್ಯಧಿಕವಾಗಿದ್ದು, ಈ ಭಾಗಗಳಿಗೆ ಹೆಚ್ಚಿನ ಆದ್ಯತೆ ದೊರೆಯಬೇಕಿತ್ತು. ನಾಲ್ಕು ಬಾರಿ ಹೊಸದುರ್ಗ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿ, ಆಡಳಿತ ಅನುಭವ ಹೊಂದಿರುವ ಹಾಗೂ ಕಾಗಿನೆಲೆ ಕನಕಗುರು ಪೀಠದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಹಿರಿಯ ರಾಜಕಾರಣಿ ಬಿ.ಜಿ.ಗೋವಿಂದಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಉಳಿದಿರುವ ಸ್ಥಾನ ಕಲ್ಪಿಸಬೇಕು. ಬರುವ ದಿನಗಳಲ್ಲಿ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಎರಡನೇ ಅವಧಿಯ ನೇಮಕಾತಿಯಲ್ಲಿಯೂ ಜನಸಂಖ್ಯೆಗೆ ಅನುಗುಣವಾಗಿ ಕುರುಬ ಸಮುದಾಯಕ್ಕೆ ಹೆಚ್ಚಿನ ಸ್ಥಾನಗಳನ್ನು ನೀಡಬೇಕು ಎಂದು ಆಗ್ರಹಿಸಿದರು.
ಕುರುಬ ಸಂಘದ ಮಾಜಿ ಕಾರ್ಯದರ್ಶಿ ಮಲ್ಲಿಕಾರ್ಜನ್ ಮಾತನಾಡಿ, ಕುರುಬ ಸಮಾಜ ತಾಳ್ಮೆಯಿಂದ ಕಾಯುತ್ತಿದೆ. ನಮ್ಮ ಪಾಲಿನ ಸಚಿವ ಸ್ಥಾನವನ್ನು ನೀಡಲೇ ಬೇಕಿದೆ. ಇದರ ಬಗ್ಗೆ ಪಕ್ಷದ ಮುಖಂಡರ ಗಮನ ಸೆಳೆಯಲಾಗುವುದು. ಒಂದು ಸಲ ಶಾಸಕರಾದವರಿಗೆ ಮಂತ್ರಿ ಸ್ಥಾನವನ್ನು ನಿಡಲಾಗಿದೆ. 4 ಭಾರಿ ಶಾಸಕರಾದವರಿಗೆ ಏಕಿಲ್ಲವೆಂದು ಪ್ರಶ್ನಿಸಿದರು.