- ಭದ್ರಾ ನಾಲೆಗಳ ದುರಸ್ತಿಗೆ ₹100 ಕೋಟಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಸಂಸದೆ ಡಾ.ಪ್ರಭಾ ಮನವಿ - - -
ಜಲ ಸಂಪನ್ಮೂಲ ಇಲಾಖೆ, ಕರ್ನಾಟಕ ನೀರಾವರಿ ನಿಗಮದಿಂದ ಶುಕ್ರವಾರ ಬಿ.ಆರ್. ಪ್ರಾಜೆಕ್ಟ್ನಲ್ಲಿ ಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ನಂತರ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ನೇತೃತ್ವದಲ್ಲಿ ಸಂಸದ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕರಾದ ಡಿ.ಜಿ.ಶಾಂತನಗೌಡ, ಬಸವರಾಜ ವಿ.ಶಿವಗಂಗಾ, ಕೆ.ಎಸ್.ಬಸವಂತಪ್ಪ, ಜಿಲ್ಲೆಯ ರೈತ ಮುಖಂಡರು, ರೈತರು ಮನವಿ ಅರ್ಪಿಸಿ, ಭದ್ರಾ ಬಲದಂಡೆ ನಾಲೆ ಬದಲಿಗೆ ತುಂಗಾ ನದಿಯಿಂದಲೇ ನೀರು ಪೂರೈಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮನವಿ ಅರ್ಪಿಸಿ, ದಾವಣಗೆರೆ ಜಿಲ್ಲೆಯ ಭದ್ರಾ ಅಚ್ಚುಕಟ್ಟಿನ ನಾಲೆಗಳು ನಿರ್ವಹಣೆ ಕೊರತೆಯಿಂದ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೆಲವೆಡೆ ನಾಲೆಗಳು ಕುಸಿದು ನೀರು ವ್ಯರ್ಥವಾಗಿ ಹೊರಹೋಗುತ್ತಿದೆ. ಮತ್ತಿತರೆ ಕಡೆಗಳಲ್ಲಿ ಹೂಳು ತುಂಬಿರುವುದರಿಂದ ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರಗೆ ಒತ್ತಾಯಿಸಿದರು.ಕಳೆದ ವರ್ಷ ಭದ್ರಾ ಎಂಜಿನಿಯರ್ಗಳನ್ನು ಕರೆಸಿ, ಚರ್ಚಿಸಿದಾಗ ಸುಮಾರು ₹100 ಕೋಟಿ ಅನುದಾನದ ಅಗತ್ಯ ಇರುವುದನ್ನು ಹೇಳಿದ್ದರು. ಆಗಲೇ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ₹100 ಕೋಟಿ ಅನುದಾನಕ್ಕೆ ಮನವಿ ಸಲ್ಲಿಸಿದ್ದೆವು. ಭದ್ರಾ ಅಚ್ಚುಕಟ್ಟು ಕೊನೆ ಭಾಗವು 4 ಉಪ ವಿಭಾಗಗಳನ್ನು ಒಳಗೊಂಡಿದೆ. ಒಟ್ಟಾರೆ, 32 ಸಾವಿರ ಹೆಕ್ಟೇರ್ ಜಮೀನಿಗೆ ನೀರು ಸಿಗುತ್ತದೆ. ಆದರೆ, ಸುಮಾರು 5700 ಹೆಕ್ಟೇರ್ ಜಮೀನಿಗೆ ಬೇಸಿಗೆ ವೇಳೆ ನೀರು ತಲುಪದ ಕಾರಣ ರೈತರು ವರ್ಷಕ್ಕೆ ಕೇವಲ ಒಂದೇ ಬೆಳೆಗೆ ಮಾತ್ರ ಸೀಮಿತವಾಗುತ್ತಿದ್ದಾರೆ. ಇದರಿಂದ ರೈತರಿಗೆ ತೀವ್ರ ಆರ್ಥಿಕ ನಷ್ಟವಾಗುತ್ತಿದೆ ಎಂದು ವಿವರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಹಿರಿಯ ನಾಯಕರಾದ ಟಿ.ಬಿ.ಜಯಚಂದ್ರ, ಶಾಸಕರಾದ ಡಿ.ಜಿ. ಶಾಂತನಗೌಡ, ಕೆ.ಎಸ್.ಬಸವಂತಪ್ಪ, ಬಸವರಾಜ ವಿ.ಶಿವಗಂಗಾ, ಬಿ.ಕೆ. ಸಂಗಮೇಶ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.
-12ಕೆಡಿವಿಜಿ6.ಜೆಪಿಜಿ: