- ಗೊಬ್ಬರಕ್ಕೆ ಆಗ್ರಹಿಸಿ ಜಗಳೂರು ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ರೈತರ ಆಗ್ರಹ
- - -
ಕನ್ನಡಪ್ರಭ ವಾರ್ತೆ ಜಗಳೂರುಅಸಮರ್ಪಕ ಯೂರಿಯಾ ಪೂರೈಕೆ ಹಿನ್ನೆಲೆ ವಿವಿಧ ಗ್ರಾಮಗಳ ನೂರಾರು ರೈತರು ತಹಸೀಲ್ದಾರ್ ಕಚೇರಿ ಮುತ್ತಿಗೆ ಹಾಕಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಸೋಮವಾರ ನಡೆಯಿತು.
ಬೆಳಗ್ಗೆಯಿಂದಲೇ ವಿವಿಧ ಫರ್ಟಿಲೈಜರ್ ಅಂಗಡಿಗಳ ಮುಂದೆ ಯೂರಿಯಾ ಗೊಬ್ಬರಕ್ಕಾಗಿ ಕಾದು ಕುಳಿತ ರೈತರಿಗೆ ಅಂಗಡಿ ಮಾಲೀಕರು ಗೊಬ್ಬರ ಬಂದಿಲ್ಲ ಎಂದು ತಿಳಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ರೈತರು ರಸಗೊಬ್ಬರ ಅಂಗಡಿ ಮಾಲೀಕರು ಮತ್ತು ಕೆಲಸಗಾರರ ವಿರುದ್ಧವೇ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಅಂಗಡಿಗಳ ಮಾಲೀಕರು ಸ್ವಯಂ ಅಂಗಡಿಗಳನ್ನು ಬಂದ್ ಮಾಡಿದರು.
ತಹಸೀಲ್ದಾರ್ ಸೈಯದ್ ಕಲೀಂ ಉಲ್ಲಾ ಆಗಮಿಸಿ, ರೈತರನ್ನು ಸಮಾಧಾನಪಡಿಸಿದರು. ಮಂಗಳವಾರ ಸಂಜೆ ಯೂರಿಯಾ ದಾಸ್ತಾನು ಬರಲಿದೆ. ಈ ಸಂಬಂಧ ಕೃಷಿ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಶೀಘ್ರ ಗೊಬ್ಬರ ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು. ಅನಂತರ ಪ್ರತಿಭಟನಾನಿರತ ರೈತರು ಮನೆಗಳ ಕಡೆಗೆ ನಡೆದರು. ಕೃಷಿ ಇಲಾಖೆ ಎಡಿಎ ಎಚ್.ಶ್ವೇತಾ ಸೇರಿದಂತೆ ಇಲಾಖೆ ಸಿಬ್ಬಂದಿ ಮತ್ತು ತೋಟಗಾರಿಕೆ ಇಲಾಖೆ ಎಸ್ಎಡಿಎಚ್ ಪ್ರಭು ಶಂಕರ್ ಸ್ಥಳದಲ್ಲಿ ಹಾಜರಿದ್ದರು.
-28ಜೆ.ಎಲ್.ಆರ್.ಚಿತ್ರ2: