ಕೊಪ್ಪಳ(ಯಲಬುರ್ಗಾ):
ಕಾಮಗಾರಿ, ಅಭಿವೃದ್ಧಿ ಕಾರ್ಯಗಳ ಚರ್ಚೆಯಾಗಬೇಕಿದ್ದ ಯಲಬುರ್ಗಾ ಪಟ್ಟಣ ಪಂಚಾಯಿತಿ ಮಾಸಿಕ ಸಾಮಾನ್ಯ ಸಭೆ ಅಧ್ಯಕ್ಷರ ಹಾಗೂ ಸದಸ್ಯರ ನಡುವಿನ ಮಾತಿನ ಚಕಮಕಿಗೆ ಸಾಕ್ಷಿಯಾಯಿತು. ಅಧ್ಯಕ್ಷ ಅಂದಯ್ಯ ಕಳ್ಳಿಮಠ ರಾಜೀನಾಮೇಯನ್ನು ಸದಸ್ಯರು ಕೇಳಿದರೆ, ನಾನೇಕೇ ರಾಜೀನಾಮೆ ನೀಡಬೇಕೆಂದು ಕಳ್ಳಿಮಠ ತಿರುಗೇಟು ನೀಡಿದರು.
ಯಲಬುರ್ಗಾದ ಪಟ್ಟಣ ಪಂಚಾಯಿತಿಯಲ್ಲಿ ಸೋಮವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ನೀವು ಅಧ್ಯಕ್ಷರಾಗಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಾರ್ಡ್ಗಳ ಅಭಿವೃದ್ಧಿಗೆ ಚಿಂತಿಸಿಲ್ಲ. ಪಟ್ಟಣದ ೧೫ ವಾರ್ಡ್ಗಳಲ್ಲಿ ಕುಡಿಯುವ ನೀರು, ಚರಂಡಿ ಸ್ವಚ್ಛತೆ, ಬೀದಿದೀಪಗಳ ನಿರ್ವಹಣೆ ಸೇರಿದಂತೆ ಹಲವಾರು ಸಮಸ್ಯೆಗಳಿದ್ದರು ಪರಿಹರಿಸುವಲ್ಲಿ ವಿಫಲರಾಗಿದ್ದೀರಿ. ನೀವು ಪ್ರತಿನಿಧಿಸುವ 2ನೇ ವಾರ್ಡ್ ಸಹ ಸಮಸ್ಯೆಗಳಿಂದ ಕೂಡಿದೆ. ಅಭಿವೃದ್ಧಿ ದೃಷ್ಟಿಕೋನವಿಲ್ಲದೆ ಅಧಿಕಾರಕ್ಕೆ ಅಂಟಿಕೊಂಡಿದ್ದೀರಿ. ಪಟ್ಟಣದ ಅಭಿವೃದ್ಧಿಗೆ ನಿಮಗೆ ಬೇಕಿಲ್ಲ. ಹೀಗಾಗಿ ರಾಜೀನಾಮೆ ನೀಡಬೇಕೆಂದು ಎಲ್ಲ ಒಕ್ಕೂರಲಿನಿಂದ ಆಗ್ರಹಿಸಿದರು.ಮುಖ್ಯಾಧಿಕಾರಿ ನಾಗೇಶ ಮಾತನಾಡಿ, ಹಾಲಿ ಅಧ್ಯಕ್ಷರ ನೇತೃತ್ವದಲ್ಲಿ ಒಂದು ಸಭೆ ನಡೆದಿದೆ. 2 ಸಭೆ ಕೋರಂ ಕೊರತೆಯಿಂದ ರದ್ದಾಗಿದೆ ಎಂದರು. ಆಗ ಸದಸ್ಯ ರಿಯಾಜ್ ಖಾಜಿ, ಅಧ್ಯಕ್ಷರೇ ಸಭೆಗೆ ಹಾಜರಾಗಿಲ್ಲವೆಂದು ನಾಲ್ವರಿಗೆ ನೋಟಿಸ್ ನೀಡಿದ್ದೀರಿ ಎಂದು ಮುಖ್ಯಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ೨೦ ವರ್ಷ ರಾಜಕೀಯ ಅನುಭವವಿದ್ದು ಅಧಿಕಾರಕ್ಕಾಗಿ ಸದಸ್ಯರ ವಿರುದ್ಧವೇ ಸುಳ್ಳು ಆರೋಪ ಮಾಡುವುದು ಯಾವ ನ್ಯಾಯ ಎನ್ನುತ್ತಿದ್ದಂತೆ ಬಿಜೆಪಿ ಸದಸ್ಯ ಅಮರೇಶ ಹುಬ್ಬಳ್ಳಿ ಕೂಡಲೇ ಅಧ್ಯಕ್ಷರು ರಾಜೀನಾಮೆ ನೀಡಬೇಕು. ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಕೆಲವರ ಅಣತಿಯಂತೆ ಆಡಳಿತ ಮಾಡುತ್ತಿದ್ದಾರೆಂದು ಆರೋಪಿಸಿದರು.
ಈ ನಡುವೆ ಮುಖ್ಯಾಧಿಕಾರಿ ನಾಗೇಶ ಅವರು ಸಭೆಯಲ್ಲಿ ೧೬ ವಿವಿಧ ವಿಷಯಗಳಿಗೆ ಅನುಮೋದನೆ ಪಡೆದುಕೊಂಡರು. ಶಿಕ್ಷಣ ಇಲಾಖೆಗೆ ನಿವೇಶನ ಹಾಗೂ ಬಣಜಿಗ ಸಮುದಾಯ ಭವನಕ್ಕೆ ನಿವೇಶನವನ್ನು ಪಟ್ಟಣದ ಪಶ್ಚಿಮ ಭಾಗದಲ್ಲಿರುವ ೨,೩,೪,೫ ಖಾಲಿ ಇರುವ ಜಾಗೆಯನ್ನು ಯಾವುದೇ ಕಾರಣಕ್ಕೂ ನೀಡಬಾರದು ಎಂದು ಸಭೆಯಲ್ಲಿ ನಿರ್ಣಯ ಕೈಗೊಂಡರು.
ಪಪಂ ಅಧ್ಯಕ್ಷರ ವಿರುದ್ಧ ಸೋಮವಾರ ಸಭೆಯಲ್ಲಿ ೧೪ ಸದಸ್ಯರು ಅವಿಶ್ವಾಸ ಗೊತ್ತುವಳಿ ಮಾಡುವಂತೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು. ಈಗಾಗಲೇ 2 ಭಾರೀ ಅವಿಶ್ವಾಸ ಮಾಡಿದ್ದು ಅವುಗಳಿಗೆ ನ್ಯಾಯಾಲಯದಿಂದ ತಡೆಯಾಜ್ಞೆ ತರುವಲ್ಲಿ ಅಧ್ಯಕ್ಷರು ಯಶಸ್ವಿಯಾಗಿದ್ದರು. ಈ ಸಲ ಮತ್ತೆ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆನನ್ನ ವಿರುದ್ಧದ ಅವಿಶ್ವಾಸ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸದು. ನಾನು ₹1 ಹಗರಣ ಮಾಡಿಲ್ಲ. ಆದರೂ ಸದಸ್ಯರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಹೈಕಮಾಂಡ್ ಹೇಳಿದರೂ ಸದಸ್ಯರು ಮಾತು ಕೇಳುತ್ತಿಲ್ಲ.