ಹೆಜಮಾಡಿ ಟೋಲ್ ವ್ಯಾಪ್ತಿಯ ಜನರಿಗೆ ರಿಯಾಯತಿಗೆ ಶಿಫಾರಸು: ಡಿಸಿ ಸ್ವರೂಪ

KannadaprabhaNewsNetwork |  
Published : Aug 20, 2026, 02:45 AM IST
18ಡಿಸಿ | Kannada Prabha

ಸಾರಾಂಶ

Global Ranking: MAHE Makes Significant Progress

ಉಡುಪಿ: ಉಡುಪಿ ಜಿಲ್ಲೆಯ ಸಾಸ್ತಾನ ಮತ್ತು ಶಿರೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಟೋಲ್‌ ವ್ಯಾಪ್ತಿಯ ಜನರಿಗೆ ನೀಡಿರುವ ರಿಯಾಯಿತಿಯನ್ನು ಹೆಜಮಾಡಿ ಟೋಲ್ ವ್ಯಾಪ್ತಿಯ ಸ್ಥಳೀಯರಿಗೆ ನೀಡುವಂತೆ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿಗೆ ಶಿಫಾರಸು ಪತ್ರ ಬರೆಯಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು. ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಟೋಲ್ ಸುಂಕ ವಸೂಲಾತಿ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾಸ್ತಾನ ಹಾಗೂ ಶಿರೂರು ಟೋಲ್‌ಗಳಲ್ಲಿ ಸ್ಥಳೀಯ ವಾಹನಗಳಿಗೆ ಈ ಹಿಂದೆ ನೀಡಲಾಗುತ್ತಿದ್ದ ರಿಯಾಯಿತಿಯನ್ನು ಮುಂದುವರಿಸಲಾಗಿದ್ದು, ಹೆಜಮಾಡಿ ವ್ಯಾಪ್ತಿಯಲ್ಲಿ ಮಾತ್ರ ನಿಲ್ಲಿಸಲಾಗಿದೆ ಎಂಬ ದೂರು ಕೇಳಿ ಬಂದಿವೆ. ಸಾಸ್ತಾನದಲ್ಲಿ 10 ಕಿ.ಮೀ. ವ್ಯಾಪ್ತಿಯಲ್ಲಿ ಸ್ಥಳೀಯರಿಗೆ ವಿನಾಯಿತಿ ನೀಡಲಾಗಿದೆ. ಈ ಮಾದರಿಯನ್ನೇ ಹೆಜಮಾಡಿಯಲ್ಲಿ ಅನುಸರಿಸುವಂತೆ ಜಿಲ್ಲಾಡಳಿತ ವತಿಯಿಂದ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆಯಲಾಗುವುದು ಎಂದರು.

ಈಗಾಗಲೇ ರಾಹೆ 66ರ ಕೆಲವು ವ್ಯಾಪ್ತಿಯಲ್ಲಿ ಸರ್ವಿಸ್ ರಸ್ತೆಗಳ ನಿರ್ಮಾಣಕ್ಕೆ ಅನುಮತಿ ದೊರಕಿದ್ದು, ಈ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಅಪಘಾತ ತಡೆಯಲು ಹೆದ್ದಾರಿಗಳಲ್ಲಿ ಸರಿಯಾದ ಸೂಚನಾ ಫಲಕ ಅಳವಡಿಸುವ ಮತ್ತಿತರ ಸುರಕ್ಷತಾ ಕ್ರಮಗಳಿಗೆ ಒತ್ತು ನೀಡಬೇಕು ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು. ಸಭೆಯಲ್ಲಿ ಎಸ್ಪಿ ಹರಿರಾಮ್ ಶಂಕರ್, ಎಡಿಸಿ ಅಬೀದ್ ಗದ್ಯಾಳ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್., ರಾಹೆ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್, ಟೋಲ್ ವ್ಯಾಪ್ತಿಯ ನಾಯಕರು ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಖಾಸಗಿ ಬಸ್‌ ಪಲ್ಟಿಯಾಗಿ ಬೈಕ್‌ ಸವಾರ ಸಾವು
ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಮುಂದುವರೆದ ಧರಣಿ