- ಏ.1ರಿಂದಲೇ ಅನಿರ್ದಿಷ್ಟಾವಧಿ ಧರಣಿ: ಆಲೂರು ಲಿಂಗರಾಜ । ಈಗಾಗಲೇ ₹3 ಕೋಟಿ ಬಿಡುಗಡೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ಜಿಲ್ಲಾ ಕೇಂದ್ರದ ಮಧ್ಯ ಭಾಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನಕ್ಕೆ ಭೂಮಿಪೂಜೆ ನೆರವೇರಿಸದಿದ್ದರೆ, ಏ.1ರಿಂದಲೇ ಮಹಾನಗರ ಪಾಲಿಕೆ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು ಎಂದು ಸ್ವಾಭಿಮಾನಿ ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣ ಹೋರಾಟ ಸಮಿತಿ ಮುಖಂಡ ಆಲೂರು ನಿಂಗರಾಜ ಜಿಲ್ಲಾಡಳಿತಕ್ಕೆ ಎಚ್ಚರಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳಿಂದಲೂ ಅಂಬೇಡ್ಕರ್ ಭವನ ನಿರ್ಮಾಣದ ವಿಚಾರ ನನೆಗುದಿಗೆ ಬಿದ್ದಿದೆ. ₹5 ಕೋಟಿ ಅನುದಾನ ಇದಕ್ಕೆಂದೇ ಮೀಸಲಿಟ್ಟಿದ್ದು, ₹3 ಕೋಟಿ ಸಹ ಬಿಡುಗಡೆಯಾಗಿದೆ. ಹೀಗಿದ್ದರೂ, ಕಾಮಗಾರಿ ಮಾತ್ರ ಇನ್ನೂ ಆರಂಭವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದಾವಣಗೆರೆಯಲ್ಲಿ ಅಂಬೇಡ್ಕರ್ ಭವನ ನಿರ್ಮಿಸುವಂತೆ ಅನೇಕ ಮುಖಂಡರು ಹಲವು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದಿದ್ದೇವೆ. 2009ರಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದಾಗ ಹೈಸ್ಕೂಲ್ ಮೈದಾನದಲ್ಲಿ ಕಪ್ಪು ಬಟ್ಟೆ ಪ್ರದರ್ಶಸಿ, ಗಮನ ಸೆಳೆದಿದ್ದೆವು. ಆಗ ಸ್ಥಳದಲ್ಲೇ ₹3 ಕೋಟಿ ಮಂಜೂರು ಮಾಡಿದ್ದರು. ಆದರೆ, ಭವನ ಮಾತ್ರ ಇಂದಿಗೂ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಶಾಬನೂರು ರಾಜು, ಅಂಜಿನಪ್ಪ ಶಾಬನೂರು, ಕರಿಯಪ್ಪ ಆವರಗೆರೆ, ಎಂ.ಹರೀಶ ಇತರರು ಇದ್ದರು.
ಕೋಟ್ ದಾವಣಗೆರೆಯು ಜಿಲ್ಲೆಯಾಗಿ 3 ದಶಕಗಳೇ ಕಳೆಯುತ್ತಿದ್ದರೂ, ಅಂಬೇಡ್ಕರ್ ಭವನ ಮಾತ್ರ ಇಂದಿಗೂ ಆಗಿಲ್ಲ. ಅಂಬೇಡ್ಕರ್ ಭವನಕ್ಕಾಗಿ ಪಕ್ಷಬೇಧ ಮರೆತು, ಎಲ್ಲ ಜಾತಿ, ಸಮುದಾಯ, ಸಂಘಟನೆಗಳ ಮುಖಂಡರೂ ಹೋರಾಟ ನಡೆಸಿಕೊಂಡೇ ಬಂದಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಪ್ರಥಮ ಆದ್ಯತೆ ಮೇಲೆ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕಾರ್ಯೋನ್ಮುಖರಾಗಬೇಕು
- - - -18ಕೆಡಿವಿಜಿ61.ಜೆಪಿಜಿ: