ಹೆಬ್ಬಾವೊಂದು ಮೇಕೆ ಮರಿಯನ್ನು ತಿನ್ನಲು ಬಂದಾಗ ಉರಗತಗಜ್ಞರ ಸಹಾಯದಿಂದ ಹೆಬ್ಬಾವನ್ನು ಸೆರೆಹಿಡಿದ ಘಟನೆ ತಾಲೂಕಿನ ಮಣುವಿನಕುರಿಕೆ ಗ್ರಾಮದಲ್ಲಿ ನಡೆದಿದೆ.
ಕೊರಟಗೆರೆ: ಹೆಬ್ಬಾವೊಂದು ಮೇಕೆ ಮರಿಯನ್ನು ತಿನ್ನಲು ಬಂದಾಗ ಉರಗತಗಜ್ಞರ ಸಹಾಯದಿಂದ ಹೆಬ್ಬಾವನ್ನು ಸೆರೆಹಿಡಿದ ಘಟನೆ ತಾಲೂಕಿನ ಮಣುವಿನಕುರಿಕೆ ಗ್ರಾಮದಲ್ಲಿ ನಡೆದಿದೆ.
ಕುರಿ ಮೇಯಿಸುತ್ತಿದ್ದ ವೇಳೆ ಸುಮಾರು 11 ಅಡಿ ಉದ್ದ, 16 ಕೆಜಿ ತೂಕದ ಬೃಹತ್ ಗಾತ್ರದ ಹೆಬ್ಬಾವು ಮೇಕೆಯ ಮೇಲೆ ದಾಳಿ ಮಾಡಿ, ಮೇಕೆ ಮರಿ ನುಂಗಲು ಯತ್ನಿಸುತ್ತಿದ್ದ ವೇಳೆ ಕುರಿ ಮಾಲೀಕ ಮೇಕೆ ಮರಿ ಪ್ರಾಣ ಉಳಿಸಲು ಜೋರಾಗಿ ಕಿರುಚಾಡಿದ್ದಾರೆ. ಕಿರುಚಾಟಕ್ಕೆ ಬೆದರಿದ ಹೆಬ್ಬಾವು ಕತ್ತಾಳೆ ಗಿಡ ಸೇರಿ ಅವಿತುಕೊಂಡಿದೆ. ಕೂಡಲೇ ಸ್ಥಳೀಯರು ತುಮಕೂರು ವರಂಗಲ್ ಫೌಂಡೇಶನ್ ವನ್ಯಜೀವಿ ಹಾಗೂ ಉರಗ ರಕ್ಷಣಾ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ದಿಲೀಪ್ ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ಸೆರೆ ಹಿಡಿದು ಹೊರ ತಂದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟರು.
ಈ ಕಾರ್ಯಾಚರಣೆಯಲ್ಲಿ ಆರ್ಎಫ್ಒ ರವಿಕುಮಾರ್ ನೇತೃತ್ವದಲ್ಲಿ ಡಿಆರ್ಎಫ್ಒ ದಿಲೀಪ್, ರಘು, ಗುರುಕಿರಣ್, ಹನುಮಯ್ಯ, ರಂಜನ್, ಕಿರಣ್ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.