ಜಿ. ದೇವರಾಜ ನಾಯ್ದು
ಪಟ್ಟಣದ ಮುಖ್ಯ ರಸ್ತೆಯಲ್ಲಿ ಬರುವ ಪ್ರಜಾಸೌಧದ ನಿರ್ಮಾಣ ಮಾಡಲು ಉದ್ದೇಶಿಸಿರುವ ಸ್ಥಳದ ಸಮೀಪದಲ್ಲಿ ಬರುವ ಕೋಟ್ಯಂತರ ರುಪಾಯಿ ಬೆಲೆಬಾಳುವ ಸರ್ಕಾರಿ ಜಮೀನನ್ನು ಭೂ ಕಬಳಿಕೆ ಮಾಡಲು ಹೊರಟಿರುವ ವಿಶ್ವೇಶ್ವರ ಪ್ರಸಾದ್ ಕೂಡಲೇ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿರುವ ಶೆಡ್ಗಳನ್ನು ತೆರವುಗೊಳಿಸಿ ಜಮೀನನ್ನು ಸರ್ಕಾರದ ವಶಕ್ಕೆ ನೀಡುವಂತೆ 24.05.2023ರಂದು ಅಂದಿನ ಜಿಲ್ಲಾಧಿಕಾರಿ ಸಹ ನೋಟಿಸ್ ಜಾರಿಗೊಳಿಸಿದ್ದಾರೆ. ಇದನ್ನು ಮರೆಮಾಚಿದ ಅಧಿಕಾರಿಗಳ ವಿರುದ್ಧ ಲೋಕಯುಕ್ತ ಅಧಿಕಾರಿಗಳಿಗೂ ದೂರು ಸಲ್ಲಿಸಲಾಗಿದೆ. ಸಾರ್ವಜನಿಕರ ಒತ್ತಾಯದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಕಟ್ಟುನಿಟ್ಟಿನ ಆದೇಶದ ಮೇರೆಗೆ ತಾಲೂಕು ದಂಡಾಧಿಕಾರಿ ಗುರುಪ್ರಸಾದ್ 4.4.2025 ರಂದು ನೋಟಿಸ್ ಜಾರಿಗೊಳಿಸಿ 15 ದಿನಗಳ ಕಾಲಾವಕಾಶ ನೀಡಿ ಅವಧಿ ಮುಗಿದರೂ ಸರ್ಕಾರಿ ಜಮೀನನ್ನು ತಾಲೂಕು ದಂಡಾಧಿಕಾರಿ ವಶಕ್ಕೆ ಪಡೆಯಲು ಕಾಲಾವಕಾಶ ನೀಡಿದ್ದಾರೆ. ತಾಲೂಕು ಮಟ್ಟದ ಛಲವಾದಿ ಮಹಾಸಭಾ ವತಿಯಿಂದ ಮಾ.12, 2025ರಂದು ಪಟ್ಟಣದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಸರ್ಕಾರಿ ಜಮೀನನ್ನು ಕಬಳಿಸಲು ಹೊರಟಿರುವ ಬಗ್ಗೆ ಸಹ ದೂರು ಸಲ್ಲಿಸಿ ಸರ್ಕಾರಿ ಜಮೀನು ಉಳಿಸುವಂತೆ ಮನವಿ ಮಾಡಲಾಗಿತ್ತು.
ಖಾಸಗಿ ವ್ಯಕ್ತಿ ಒಬ್ಬ ಕೋಟ್ಯಂತರ ರು.ಬೆಲೆಬಾಳುವ ಸರ್ಕಾರಿ ಜಮೀನನ್ನು ಕಬಳಿಸಲು ಹೊರಟಿರುವುದನ್ನು ಜಿಲ್ಲಾಧಿಕಾರಿಗೆ ಹಲವು ವರ್ಷಗಳಿಂದ ಸಾರ್ವಜನಿಕರು ಗಮನಕ್ಕೆ ತಂದಿದ್ದರೂ ಇನ್ನೂ ಸಹ ಜಮೀನು ತೆರವುಗೊಳಿಸದೆ ಇರುವುದರಿಂದ ಲೋಕಾಯುಕ್ತ ಅಧಿಕಾರಿಗಳಿಗೂ ದೂರು ಸಲ್ಲಿಸಲಾಗಿದೆ ಈ ಬಗ್ಗೆ ಜಿಲ್ಲಾಧಿಕಾರಿ ಈ ಕೂಡಲೇ ಸರ್ಕಾರಿ ಜಮೀನು ವಶಕ್ಕೆ ಪಡೆಯಲು ಕೂಡಲೇ ತಹಸೀಲ್ದಾರ್ಗೆ ಸೂಚನೆ ನೀಡಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಂಘಟನೆಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ.-ಬಸವರಾಜ್, ಅಧ್ಯಕ್ಷ, ಛಲವಾದಿ ಮಹಾಸಭಾ ತಾಲೂಕು ಘಟಕ ಹನೂರು