ಹರಿಹರ: ಜೀವನ ಅನ್ನುವ ಜೋಳಿಗೆಯಲ್ಲಿ ಭಗವಂತ ಎಲ್ಲರಿಗೂ ಸಂತೋಷದ ಬುತ್ತಿಯನ್ನೇ ಇಟ್ಟು ಕಳಿಸಿರುತ್ತಾನೆ. ಆತನ ಅರಿವು ಮತ್ತು ಸಾಕ್ಷಾತ್ಕಾರ ಪಡೆಯಲು ಭಕ್ತಿಯೊಂದೇ ಸುಲಭ ಮಾರ್ಗ. ಮನೆ ಎಂಬ ಮನದಲ್ಲಿ ನೆಲೆಸಿರುವ ಪರಮಾತ್ಮನನ್ನು ಅರಿಯದೇ ಎಲ್ಲೆಲ್ಲೋ ಹುಡುಕಾಡುತ್ತಿರುವುದು ಒಳ್ಳೆಯದಲ್ಲವೆಂದು ಬಾಳೆಹೊನ್ನೂರಿನ ರಂಭಾಪುರಿ ಡಾ. ವೀರಸೋಮೇಶ್ವರ ಶ್ರೀ ಅಭಿಪ್ರಾಯಪಟ್ಟರು.
ಸಮಾರಂಭದ ನೇತೃತ್ವ ವಹಿಸಿದ್ದ ಅವರಗೊಳ್ಳ ಪುರವರ್ಗ ಹಿರೇಮಠದ ಓಂಕಾರ ಶಿವಾಚಾರ್ಯ ಶ್ರೀ ಮಾತನಾಡಿ, ಧರ್ಮವೇ ಜೀವನದ ಜೀವಾಳ. ಮನಕ್ಕೆ ಶಾಂತಿ, ಆತ್ಮಕ್ಕೆ ಆನಂದ ಕೊಡುವುದು ಧರ್ಮ. ಸಕಲ ಧರ್ಮಕ್ಕೂ ದಯೆ ಮತ್ತು ಮಾನವೀಯತೆ ಮುಕುಟಪ್ರಾಯ. ಸಜ್ಜನರ ಜೊತೆಗಿದ್ದು ಸತ್ಪುರುಷರ ಹಾದಿಯಲ್ಲಿ ಸಾಗಿದಾಗ ಸುಖ- ಶಾಂತಿ ಪ್ರಾಪ್ತವಾಗುತ್ತದೆ ಎಂದರು.
ಉಪದೇಶಾಮೃತ ನೀಡಿದ ಕಡೇನಂದಿಹಳ್ಳಿ ರೇವಣಸಿದ್ಧ ಶಿವಾಚಾರ್ಯ ಸ್ವಾಮಿಗಳು, ಹಾರನಹಳ್ಳಿ ರಾಮಲಿಂಗೇಶ್ವರ ಮಠದ ವಿಶ್ವಾರಾಧ್ಯ ಶಿವಾಚಾರ್ಯ ಶ್ರೀ ಮಾತನಾಡಿದರು. ರಾಮಘಟ್ಟ ಪುರವರ್ಗ ಮಠದ ರೇವಣಸಿದ್ಧ ಶಿವಾಚಾರ್ಯ ಶ್ರೀ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ನಾಗವಂದ ಶಿವಯೋಗಿ ಶಿವಾನಂದ ಶಿವಾಚಾರ್ಯರು ಉಪಸ್ಥಿತರಿದ್ದರು. ಚಿರಸ್ಥಹಳ್ಳಿ ಮಲ್ಲಿಕಾರ್ಜುನ ಸ್ವಾಮಿ ಕಲ್ಮಠ ನಿರೂಪಿಸಿದರು.ಸಮಾರಂಭಕ್ಕೂ ಮುನ್ನ ಗ್ರಾಮದಲ್ಲಿ ಶ್ರೀ ರಂಭಾಪುರಿ ಶ್ರೀ ಅವರ ಅಡ್ಡಪಲ್ಲಕ್ಕಿ ಮಹೋತ್ಸವ ಸಂಭ್ರಮದಿಂದ ನೆರವೇರಿತು. ನಂತರ ಗೋಪುರಕ್ಕೆ ಕಳಸಾರೋಹಣ ನೆರವೇರಿಸಿ, ಶ್ರೀಗಳು ಭಕ್ತ ಸಮುದಾಯಕ್ಕೆ ಶುಭ ಹಾರೈಸಿದರು. ಅನ್ನ ದಾಸೋಹ ಜರುಗಿತು.
-19HRR.02 & 02A: