ನಮ್ಮನ್ನು ಹೆತ್ತವರೇ ಕಣ್ಣಿಗೆ ಕಾಣುವೆ ದೇವರು

KannadaprabhaNewsNetwork |  
Published : Jan 06, 2026, 01:15 AM IST
 ಫೋಟೋ ಇದೆ : 5 ಕೆಜಿಎಲ್ 1 :  ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಭಕ್ತರು ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಅಭಿನಂದಿಸಿದರು. | Kannada Prabha

ಸಾರಾಂಶ

ನಮ್ಮ ಬದುಕನ್ನು ರೂಪಿಸುವ ತಂದೆ ತಾಯಿಯೇ ನಮಗೆಲ್ಲ ಕಣ್ಣಿಗೆ ಕಾಣುವ ದೇವರು ಎಂದು ಬೆಟ್ಟಹಳ್ಳಿ ಮಠದ ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕುಣಿಗಲ್ನಮ್ಮ ಬದುಕನ್ನು ರೂಪಿಸುವ ತಂದೆ ತಾಯಿಯೇ ನಮಗೆಲ್ಲ ಕಣ್ಣಿಗೆ ಕಾಣುವ ದೇವರು ಎಂದು ಬೆಟ್ಟಹಳ್ಳಿ ಮಠದ ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ತಾಲೂಕಿನ ಬೆಟ್ಟಹಳ್ಳಿ ಮಠದಲ್ಲಿ ಏರ್ಪಡಿಸಿದ್ದ ಹಳೆ ವಿದ್ಯಾರ್ಥಿಗಳ ಮತ್ತು ಹಿತೈಷಿಗಳ ಸಮಾವೇಶದಲ್ಲಿ ಭಾಗವಹಿಸಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಗುರು ವಂದನೆ ಸ್ವೀಕರಿಸಿ ನೂರಾರು ತಾಯಂದಿರಿಗೆ ಸೀರೆ ವಿತರಿಸಿ ಮಾತನಾಡಿದರು. ಈ ಭೂಮಿ ಮೇಲೆ ಹುಟ್ಟಿರುವ ಎಲ್ಲಾ ಮನುಷ್ಯನು ಕೂಡ ಪ್ರಥಮವಾಗಿ ಕಣ್ಣಿಗೆ ಕಾಣುವ ದೇವರಾದ ತಾಯಿಯನ್ನೇ ನೋಡುತ್ತಾರೆ. ಆಕೆ ಆ ಮಗುವಿನ ಹಾರೈಕೆಗೆ ಸದಾ ತನ್ನ ಜೀವನವನ್ನೇ ಸವೆಸುತ್ತಾ ಕಷ್ಟಗಳೆಲ್ಲ ನನಗಿರಲಿ ಸುಖವೊಂದು ನನ್ನ ಮಗುವಿಗೆ ಇರಲಿ ಎಂದು ಬದುಕು ಸಾಗಿಸುತ್ತಿರುವ ಆ ಮಹಾ ತಾಯಿಯ ಪಾದದ ಕೆಳಗೆ ದೇವರು ಇರುತ್ತಾನೆ. ಯಾವ ಮಗು ಪ್ರತಿದಿನ ಎದ್ದು ತನ್ನ ತಂದೆ ತಾಯಿಗಳಿಗೆ ನಮಸ್ಕಾರ ಮಾಡಿ ತನ್ನ ನಿತ್ಯದ ಕೆಲಸಗಳನ್ನು ಪ್ರಾರಂಭಿಸುತ್ತಾನೋ ಅಂತವನು ತನ್ನ ಜೀವನದಲ್ಲಿ ಸಾಧನೆ ಮಾಡಬಹುದು ಎಂದರು. ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ನೆಲಮಂಗಲ ಬಸವಣ್ಣ ದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ತನ್ನ ಹುಟ್ಟು ಹಬ್ಬವನ್ನು ಸ್ವಾರ್ಥಕ್ಕೆ ಮಾಡಿಕೊಳ್ಳದೆ ಹಲವಾರು ಸಮಾಜದ ತಾಯಂದಿರನ್ನು ಗುರುತಿಸಿ ಅಭಿನಂದಿಸುವ ಕೆಲಸವನ್ನು ಬೆಟ್ಟಹಳ್ಳಿ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾಡುತ್ತಿದ್ದಾರೆ ಪ್ರತಿಯೊಬ್ಬರು ಕೂಡ ತಮ್ಮ ಹುಟ್ಟು ಹಬ್ಬವನ್ನು ಕೇವಲ ಸ್ವಾರ್ಥಕ್ಕಾಗಿ ಮಾಡದೆ ಸಮಾಜಕ್ಕಾಗಿ ಮಾಡುವಂತಹ ಗುಣ ಬೆಳೆಸಿಕೊಳ್ಳಬೇಕೆಂದರು,

ಮಠಗಳು ಸಮಾಜಕ್ಕಾಗಿ ಎಲ್ಲವನ್ನು ನೀಡುತ್ತಿವೆ. ಶಿಕ್ಷಣ ಅನ್ನದಾನ ಧಾರ್ಮಿಕ ಕ್ಷೇತ್ರಗಳಲ್ಲಿ ಸಮರ್ಪಣೆ ಮಾಡಿಕೊಳ್ಳುತ್ತಿದ್ದು ಪ್ರತಿಯೊಬ್ಬರೂ ಕೂಡ ಮಠದ ಸಂಪರ್ಕದಿಂದ ಸಂಸ್ಕಾರವನ್ನು ಪಡೆಯಬಹುದಾಗಿದೆ ಆದ್ದರಿಂದ ಇಂದಿನ ಕಾಲದ ಹಿರಿಯರು ಮನೆಮಠ ಎಚ್ಚರ ಎಂಬ ಮಾತುಗಳನ್ನು ಹೇಳುತ್ತಿದ್ದರು. ಅದನ್ನು ಅರಿತು ಬದುಕಿದಾಗ ಸಮಾಜದಲ್ಲಿ ಸುಖ ಶಾಂತಿ ನೆಮ್ಮದಿ ಸಿಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕುಣಿಗಲ್ ಶಾಸಕ ಡಾ. ರಂಗನಾಥ, ಮಠ ಕೇವಲ ಸ್ವಾರ್ಥಕ್ಕಾಗಿ ತನ್ನ ದುಡಿಮೆಯನ್ನು ಎಂದಿಗೂ ಕೂಡ ಮಾಡುವುದಿಲ್ಲ ಸಮಾಜಕ್ಕಾಗಿ ಮಾಡುತ್ತದೆ ಎಂಬುದಕ್ಕೆ ಬೆಟ್ಟಹಳ್ಳಿ ಮಠದ ಕಾರ್ಯಕ್ರಮಗಳು ಸಾಕ್ಷಿಯಾಗಿವೆ. ನೀರಾವರಿ ವಿಚಾರದಲ್ಲೂ ಕೂಡ ನಮ್ಮೊಂದಿಗೆ ಕೈಜೋಡಿಸಿದ್ದಾರೆ. ಅದೇ ರೀತಿ ಶಿಕ್ಷಣ ಅನ್ನದಾನ ಸೇರಿದಂತೆ ಸಾಮಾಜಿಕ ಕಾರ್ಯದಲ್ಲೂ ತೊಡಗಿಸಿಕೊಂಡಿದೆ ಅಂತಹ ಮಠಗಳಿಗೆ ಸರ್ಕಾರದಿಂದ ಹಾಗೂ ವೈಯಕ್ತಿಕವಾಗಿ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಸವ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಎಸ್ ಎಂ ಸುರೇಶ್ ಅವರಿಗೆ ಉರಿಲಿಂಗ ಶ್ರೀ ಪ್ರಶಸ್ತಿ ಹಾಗೂ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷರಾದ ಡಿ ಪಿ ದಾನಪ್ಪ ಅವರಿಗೆ ನೀಲಕಂಠ ಶ್ರೀ ಪ್ರಶಸ್ತಿ, ಗಂಗಾ ಶಾನಯ್ಯ ಕೋಗಟ್ಟ ರಾಜಣ್ಣ, ರಂಗಸ್ವಾಮಿ, ಕುಮಾರ್, ಮತ್ತು ಪುನಗನಹಳ್ಳಿ ಬಸವರಾಜು ಅವರಿಗೆ ಗುರು ರಕ್ಷೆ ನೀಡಲಾಯಿತು. ಈ ಸಂದರ್ಭದಲ್ಲಿ ಚಕ್ರಬಾವಿ ಮಠದ ಸಿದ್ದಲಿಂಗ ಸ್ವಾಮೀಜಿ, ಹಿತ್ತಲಹಳ್ಳಿ ಮಠದ ಸದಾಶಿವ ಶಿವಾಚಾರ್ಯ ಸ್ವಾಮೀಜಿ, ಸೇರಿದಂತೆ ಹಲವರು ಮಠದ ಹಿತೈಷಿಗಳು ಹಾಗೂ ಹಳೆ ವಿದ್ಯಾರ್ಥಿಗಳು ಹಾಗೂ ಭಕ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ