ಭಕ್ತರ ಋಣ ತೀರಿಸಲು ಭಗವಂತ ಕಾಯುತ್ತಾನೆ: ಶಾಸಕ ಅಶೋಕ್ ರೈ

KannadaprabhaNewsNetwork |  
Published : Aug 27, 2024, 01:32 AM IST
ಫೋಟೋ: ೨೬ಪಿಟಿಆರ್-ಶ್ರೀಕೃಷ್ಣ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀಕೃಷ್ಣ ಜಯಂತಿ ನಡೆಯಿತು. | Kannada Prabha

ಸಾರಾಂಶ

ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಗೊಲ್ಲ (ಯಾದವ ) ಸಂಘ, ಯಾದವ ಸಭಾ ತಾಲೂಕು ಸಮಿತಿ ಇವರ ಸಹಯೋಗದಲ್ಲಿ ಸೋಮವಾರ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಪುತ್ತೂರು

ದೇವರನ್ನು ನಾವು ಯಾರೂ ನೋಡಿರದಿದ್ದರೂ ಹೆತ್ತ ತಂದೆ ತಾಯಿಗಳ ಸೇವೆ ಮಾಡಿದರೆ ಖಂಡಿತಾ ದೇವರು ನಮಗೆ ಒಳಿತನ್ನು ಮಾಡುತ್ತಾನೆ. ಅದೇ ರೀತಿ ನಾವು ದೇವರನ್ನು ಭಕ್ತಿಯಿಂದ ನಂಬಿದರೆ ಭಕ್ತರ ಋಣ ತೀರಿಸಲು ಭಗವಂತ ಕೂಡ ಕಾಯುತ್ತಾನೆ ಎಂದು ಶಾಸಕ ಅಶೋಕ್ ರೈ ಹೇಳಿದರು.ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಗೊಲ್ಲ (ಯಾದವ ) ಸಂಘ, ಯಾದವ ಸಭಾ ತಾಲೂಕು ಸಮಿತಿ ಇವರ ಸಹಯೋಗದಲ್ಲಿ ಸೋಮವಾರ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಸೋಮವಾರ ನಡೆದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಆಚರಣೆ ಅನುಷ್ಠಾನ ಮಾಡುವುದರ ಜತೆಗೆ, ಆಚಾರ ವಿಚಾರಗಳ ಕಡೆಗೂ ಗಮನ ಹರಿಸಬೇಕು ಎಂದು ಹೇಳಿದ ಅವರು, ದೇವರನ್ನು ನಂಬುವ ಮೂಲಕ ನಮ್ಮ ವ್ಯಕ್ತಿತ್ವ ಅರಳುತ್ತದೆ. ಮಾತಾ ಪಿತರ ಋಣ, ದೇವ ಋಣ, ಋಷಿ ಋಣ ಇತ್ಯಾದಿಗಳು ನಮಗಿದ್ದು, ಅವುಗಳನ್ನು ತೀರಿಸುವುದು ನಮ್ಮ ಕರ್ತವ್ಯವಾಗಿದೆ ಎಂದವರು ನುಡಿದರು.ಯಾದವ ಸಭಾ ತಾಲೂಕು ಸಮಿತಿ ಅಧ್ಯಕ್ಷ ಪ್ರಸಾದ್ ಪಾಣಾಜೆ ಮಾತನಾಡಿ, ಪುತ್ತೂರು ತಾಲೂಕಿನಲ್ಲಿ ಸುಮಾರು ೨ ಸಾವಿರದಷ್ಟು ಯಾದವ ಸಮುದಾಯದ ಜನರಿದ್ದಾರೆ. ಸಮುದಾಯದ ಪೂರ್ಣ ಸಹಕಾರದೊಂದಿಗೆ ತಾಲೂಕು ಆಡಳಿತ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಿಸುವಂತಾಗಬೇಕು ಎಂದರು.ಗೊಲ್ಲ (ಯಾದವ) ಸಂಘ ಪುತ್ತೂರು ಅಧ್ಯಕ್ಷ ಇ.ಎಸ್. ವಾಸುದೇವ ಮಾತನಾಡಿದರು. ಹಿರಿಯ ಯಕ್ಷಗಾನ ಕಲಾವಿದ ಈಶ್ವರ ಭಟ್ ಗುಂಡ್ಯಡ್ಕ ಸಂಸ್ಮರಣಾ ಉಪನ್ಯಾಸ ನೀಡಿದರು.ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ತಹಸೀಲ್ದಾರ್ ಪುರಂದರ ಹೆಗ್ಡೆ, ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಉಪಸ್ಥಿತರಿದ್ದರು. ತಹಸೀಲ್ದಾರ್ ಕಚೇರಿಯ ದಯಾನಂದ್ ಸ್ವಾಗತಿಸಿದರು. ಉಪತಹಸೀಲ್ದಾರ್ ಸುಲೋಚನಾ ಕಾರ್ಯಕ್ರಮ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌
ಕರಗಕ್ಕೆ ವಿಶ್ವಪ್ರಸಿದ್ಧಿ ಪಡೆದ ಧರ್ಮರಾಯ ದೇಗುಲ ಚಿನ್ನ ಕಳವು