ಗೋಕುಲಂ ಗೋಶಾಲಾ ದೀಪಾವಳಿ ಸಂಗೀತೋತ್ಸವಕ್ಕೆ ಚಾಲನೆ

KannadaprabhaNewsNetwork |  
Published : Oct 21, 2025, 01:00 AM IST
ಗೋಕುಲಂ ಗೋಶಾಲಾ ದೀಪಾವಳಿ ಸಂಗೀತೋತ್ಸವಕ್ಕೆ ಚಾಲನೆ ನೀಡಲಾಯಿತು. | Kannada Prabha

ಸಾರಾಂಶ

ಬೇಕಲ ಗೋಕುಲಂ ಗೋಶಾಲೆಯಲ್ಲಿ ಪರಂಪರಾ ವಿದ್ಯಾಪೀಠದ ಅಡಿಯಲ್ಲಿ 5ನೇ ದೀಪಾವಳಿ ಸಂಗೀತೋತ್ಸವವನ್ನು ದೀಪಾವಳಿ ದಿನದಂದು ಉದ್ಘಾಟಿಸಲಾಯಿತು

ಮಂಗಳೂರು: ಬೇಕಲ ಗೋಕುಲಂ ಗೋಶಾಲೆಯಲ್ಲಿ ಪರಂಪರಾ ವಿದ್ಯಾಪೀಠದ ಅಡಿಯಲ್ಲಿ 5ನೇ ದೀಪಾವಳಿ ಸಂಗೀತೋತ್ಸವವನ್ನು ದೀಪಾವಳಿ ದಿನದಂದು ಉದ್ಘಾಟಿಸಲಾಯಿತು.

ಕೈಗಾರಿಕೋದ್ಯಮಿ ಹಾಗೂ ಭಾರತೀಯ ಗೋಸಂರಕ್ಷಣಾ ಹೋರಾಟಗಾರ ಕೋಲ್ಕತ್ತಾದ ಮಹಾವೀರ ಸೋನಿಕಾ ಅವರು ದೀಪ ಬೆಳಗಿಸಿದರು. ಸಮಾರಂಭದಲ್ಲಿ ಗೋಶಾಲೆ ಸಂಸ್ಥಾಪಕ ವಿಷ್ಣುಪ್ರಸಾದ್ ಹೆಬ್ಬಾರ್, ಡಾ.ನಾಗರತ್ನ ಹೆಬ್ಬಾರ್, ಪರಂಪರಾ ವಿದ್ಯಾಪೀಠದ ಸಂಗೀತ ಗುರು ವೆಳ್ಳಿಕೋತ್ ವಿಷ್ಣುಭಟ್, ಸಂಗೀತಗಾರ ತಾಮರಶ್ಶೇರಿ ಈಶ್ವರನ್ ಭಟ್ಟತಿರಿ ಇದ್ದರು.

ನಂತರ ಐದನೇ ಸಂಗೀತೋತ್ಸವದ ಮೊದಲ ಕಾರ್ಯಕ್ರಮ ಉಡುಪಿ ಪಾವನ ಆಚಾರ್ ನೇತೃತ್ವದಲ್ಲಿ ಪಂಚವಾದ್ಯ ವೀಣೆಗಳ ಕಛೇರಿ. ಇಡಯಾರ್ ಸಹೋದರರು, ತಾಮರಶ್ಶೇರಿ ಈಶ್ವರನ್ ಭಟ್ಟತಿರಿ, ವೆಳ್ಳಿಕೋತ್ ಸಹೋದರಿಯರಾದ ಉಷಾಭಟ್ ಜಯಲಕ್ಷ್ಮಿ ಭಟ್, ಕಾಞಂಗಾಡ್ ಟಿ.ಪಿ. ಶ್ರೀನಿವಾಸನ್, ಶ್ರೀಹರಿ ಭಟ್, ಚೈತನ್ಯ ಅಶೋಕ್, ಮತ್ತು ವೈಷ್ಣವಿ ನಂಬಿಯಾರ್ ಸಂಗೀತ ನೀಡಿದರು.

ಪ್ರಣವಂ ಶಂಕರನ್ ನಂಬೂದಿರಿ ಅವರ ಸಂಗೀತ ಕಛೇರಿಯಲ್ಲಿ ಎಡಪ್ಪಳ್ಳಿ ಅಜಿತ್ ಪಿಟೀಲು, ಬಾಲಕೃಷ್ಣ ಕಮ್ಮತ್ ಮೃದಂಗದಲ್ಲಿ ಮತ್ತು ಶ್ರೀಜಿತ್ ವೆಳ್ಳಾಟ್ಟತ್ತನ್ನೂರ್ ಘಟದಲ್ಲಿ ಮೆರುಗು ನೀಡಿದರು.ನಂದಿ ಮಂಟಪದಲ್ಲಿ ವೆಳ್ಳಿಕ್ಕೋತ್ ವಿಷ್ಣು ಭಟ್ ನೇತೃತ್ವದ ಪರಂಪರಾ ವಿದ್ಯಾಪೀಠದ ಭಜನಾ ಸಂಗಮದವರಿಂದ ವಿಷ್ಣು ಹೆಬ್ಬಾರ್ ರಚಿಸಿದ ಭಜನೆಯನ್ನು ಹಾಡಲಾಯಿತು. ಶ್ರೀಲತಾ ನಿಕ್ಷಿತ್ ವೀಣೆಯಲ್ಲಿ, ಕುಳಲ್ಮಂದಂ ರಾಮಕೃಷ್ಣನ್ ಮೃದಂಗದಲ್ಲಿ, ಕೃಷ್ಣಪ್ರಸಾದ್ ಹೆಬ್ಬಾರ್ ಕೀಬೋರ್ಡ್‌ನಲ್ಲಿ ಸಹಕರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಸ್ಫೋಟಕ ಬಳಕೆ: ಅಪ್ಪ, ಮಗ ಬಂಧನ
ಮಾನವೀಯತೆಯಿಂದ ಬದುಕು ಸಾಗಿಸಲಿ