ಮಲ್ಪೆ ಬಂದರಿನಲ್ಲಿ ಖಾರದ ಪುಡಿ ಎರಚಿ ಚಿನ್ನದ ಸರ ಸುಲಿಗೆ

KannadaprabhaNewsNetwork |  
Published : Feb 21, 2026, 03:00 AM IST
ಬರಿದಾಗುತ್ತಿರುವ ಗಂಗಾವಳಿಯ ತೀರದ ಒಡಲು. | Kannada Prabha

ಸಾರಾಂಶ

ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ ಮುಖಕ್ಕೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಚಿನ್ನದ ಸರ ಸುಲಿಗೆ ಮಾಡಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.

ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ ಮುಖಕ್ಕೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಚಿನ್ನದ ಸರ ಸುಲಿಗೆ ಮಾಡಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.

ಬಂದರಿನಲ್ಲಿ ಮೀನು ವ್ಯಾಪಾರ ಮಾಡುವ ದಯಾನಂದ ಕುಂದರ್ ಎಂಬವರು ಮುಂಜಾನೆ 4.30ರ ಸುಮಾರಿಗೆ ಬಂದರು ಕಚೇರಿಯ ಶೌಚಾಲಯಕ್ಕೆ ಹೋಗಿ ವಾಪಸ್‌ ಬರುವಾಗ ಅಪರಿಚಿತ ವ್ಯಕ್ತಿಯೊಬ್ಬ ಅವರಲ್ಲಿ ಮೀನಿನ ಬಗ್ಗೆ ವಿಚಾರಿಸುವ ನೆಪದಲ್ಲಿ ಹತ್ತಿರ ಬಂದು ಮುಖಕ್ಕೆ ಖಾರದ ಪುಡಿಯಲ್ಲಿ ಎರಚಿದ.

ಬಳಿಕ ಅವರನ್ನು ಸ್ವಲ್ಪ ದೂರ ಎಳೆದುಕೊಂಡು ಹೋಗಿದ್ದು, ನಂತರ ಅಲ್ಲಿದ್ದ ಇಬ್ಬರು ಅಪರಿಚಿತರು ಒಟ್ಟು ಸೇರಿ ದಯಾನಂದ ಕುಂದರ್ ಅವರಿಗೆ ಚಾಕು ತೋರಿಸಿ, ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕೊಡುವಂತೆ ಕೇಳಿದರು. ಕೊಡದೆ ಇದ್ದಾಗ ಆರೋಪಿಗಳು ಅವರ ಮುಖಕ್ಕೆ ಮತ್ತು ಬೆನ್ನಿಗೆ ಕೈಯಿಂದ ಹಲ್ಲೆ ಮಾಡಿ 6 ಲಕ್ಷ ರೂ. ಮೌಲ್ಯದ ಸುಮಾರು 6 ಪವನ್ ಚಿನ್ನದ ಸರವನ್ನು ಸುಲಿಗೆ ಮಾಡಿದರು.

ಘಟನೆ ವಿಚಾರವನ್ನು ಪೊಲೀಸರಿಗೆ ತಿಳಿಸಿದರೆ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಜಿರೆ: ಇಂದು ಭಿಡೆ ಸಹೋದರಿಯರ ಭರತನೃತ್ಯ ರಂಗಪ್ರವೇಶ
ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ತೋಯಜಾಕ್ಷ ಶೆಟ್ಟಿ ಆಯ್ಕೆ