ಫೀನಿಕ್ಸ್ ವೆಂಕಟಕೃಷ್ಣ ಮಂದಿರದ ಪದ್ಮಾವತಿ ದೇವಿಗೆ 2 ಕೋಟಿ ರು. ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

KannadaprabhaNewsNetwork |  
Published : Aug 07, 2026, 03:00 AM IST
ಪುತ್ತಿಗೆ ಶ್ರೀಗಳು ಸ್ವರ್ಣ ಕಿರೀಟವನ್ನು ಬಾಲಕೃಷ್ಣನಿಗೆ ತೊಡಿಸಿದರು. | Kannada Prabha

ಸಾರಾಂಶ

ಅಮೆರಿಕದ ಅರಿಜೋನಾ ರಾಜ್ಯದ ಫೀನಿಕ್ಸ್ ಮಹಾನಗರದಲ್ಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ವೆಂಕಟಕೃಷ್ಣ ಮಂದಿರದ ಶ್ರೀ ಪದ್ಮಾವತಿ ದೇವಿಗೆ, ಭಕ್ತರೊಬ್ಬರು ಸುಮಾರು 2 ಕೋಟಿ ರು. ಮೌಲ್ಯದ ಸ್ವರ್ಣ ಕಿರೀಟವನ್ನು ಸಮರ್ಪಿಸಿದ್ದಾರೆ.

ಉಡುಪಿ: ಅಮೆರಿಕದ ಅರಿಜೋನಾ ರಾಜ್ಯದ ಫೀನಿಕ್ಸ್ ಮಹಾನಗರದಲ್ಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ವೆಂಕಟಕೃಷ್ಣ ಮಂದಿರದ ಶ್ರೀ ಪದ್ಮಾವತಿ ದೇವಿಗೆ, ಭಕ್ತರೊಬ್ಬರು ಸುಮಾರು 2 ಕೋಟಿ ರು. ಮೌಲ್ಯದ ಸ್ವರ್ಣ ಕಿರೀಟವನ್ನು ಸಮರ್ಪಿಸಿದ್ದಾರೆ.

ಈ ಕಿರೀಟವನ್ನು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಜನ್ಮನಕ್ಷತ್ರದ ಶುಭಸಂದರ್ಭದಲ್ಲಿ, ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ದೇವಿಗೆ ಸಮರ್ಪಿಸಲಾಗುವುದು.

ಗುರುವಾರ ಬೆಂಗಳೂರಿನ ಗೋವರ್ಧನ ಕ್ಷೇತ್ರದಲ್ಲಿ, ಶ್ರೀಪಾದರು ಈ ಸ್ವರ್ಣ ಕಿರೀಟವನ್ನು ವಿಶೇಷ ಪೂಜೆಯೊಂದಿಗೆ ಬಾಲಕೃಷ್ಣನಿಗೆ ಸಮರ್ಪಿಸಿ, ಬಳಿಕ ಅದನ್ನು ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರದಲ್ಲಿ ಶ್ರೀ ಪದ್ಮಾವತಿ ದೇವಿಗೆ ಅರ್ಪಿಸುವ ಸಲುವಾಗಿ ಸಂಬಂಧಿತ ಭಕ್ತರಿಗೆ ಹಸ್ತಾಂತರಿಸಿದರು.

ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯರು, ಗೋವರ್ಧನ ಕ್ಷೇತ್ರದ ವ್ಯವಸ್ಥಾಪಕ ಶ್ರೀ ಕುಂಜಾರರು, ಸುಗುಣ ಸಂಧ್ಯಾ ಗುರುಕುಲದ ಕಾರ್ಯದರ್ಶಿ ಅಭಿಷೇಕ್ ಹಾಗೂ ಅನೇಕ ಭಕ್ತರು ಉಪಸ್ಥಿತರಿದ್ದರು.4 ವರ್ಷಗಳ ಹಿಂದೆ ಫಿನಿಕ್ಸ್‌ನ ಶ್ರೀ ವೆಂಕಟೇಶ್ವರ ಸ್ವಾಮಿಗೆ ಸುಮಾರು 4 ಕೋಟಿ ರು. ಮೌಲ್ಯದ ಸ್ವರ್ಣ ಕಿರೀಟವನ್ನು ಭಕ್ತರು ಸಮರ್ಪಿಸಿದ್ದರು.

ಈ ಕ್ಷೇತ್ರಕ್ಕಾಗಿ ಈಗಾಗಲೇ 4 ಎಕರೆ ವಿಶಾಲ ಜಮೀನನ್ನು ಪಡೆದುಕೊಳ್ಳಲಾಗಿದ್ದು, ಶ್ರೀಪಾದರ ಶಿಷ್ಯರಾದ ಅಲ್ಲಿನ ಪ್ರಧಾನ ಅರ್ಚಕ ಕಿರಣ್ ಆಚಾರ್ಯ ಅವರ ನೇತೃತ್ವದಲ್ಲಿ ಆಗಮಶಾಸ್ತ್ರದ ನಿಯಮಾನುಸಾರ ಭವ್ಯ, ವೈಭವೋಪೇತ ಹಾಗೂ ಬೃಹತ್ ದೇವಸ್ಥಾನದ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೀವನ ಕಟ್ಟಿಕೊಳ್ಳಿ; ವ್ಯಸನ ಅಲ್ಲ: ರಾಜೇಂದ್ರ ಬಿ.
ಬರಹ ಪಠ್ಯಕ್ಕೆ ಸೀಮಿತ ಆಗದಿರಲಿ: ಡಾ.ರಾಜೇಶ್‌