ಕೆಜಿಎಫ್‌ ಚಿನ್ನದ ಗಣಿಗಳಲ್ಲಿ ಚಿನ್ನ ಮಿಶ್ರಿತ ಮಣ್ಣು ಕಳವು: ಬಂಧನ

KannadaprabhaNewsNetwork |  
Published : Feb 21, 2026, 02:00 AM IST
20ಕೆಜಿಎಫ್‌1 | Kannada Prabha

ಸಾರಾಂಶ

ಇತ್ತೀಚೆಗೆ ಚಿನ್ನದ ಗಣಿಗಳ ಪ್ರದೇಶದಲ್ಲಿ ಚಿನ್ನದ ಅಧಿರು ಮಿಶ್ರಿತ ಮಣ್ಣಿನ ಎರಡು ಪ್ರಕರಣಗಳು ದಾಖಲಾಗಿದ್ದು, 12 ಸಿಮೆಂಟ್ ಚೀಲಗಳ ಚಿನ್ನ ಮಿಶ್ರಿತ ಮಣ್ಣನ್ನು ವಶಪಡಿಕೊಳ್ಳಲಾಗಿದೆ.

ಕೆಜಿಎಫ್:ದಿನೇ ದಿನೇ ಚಿನ್ನದ ಬೆಲೆ ಕಾಣುತ್ತಿರುವ ಸಂದರ್ಭದಲ್ಲಿ 2001ರಲ್ಲಿ ಮುಚ್ಚಿರುವ ಚಿನ್ನದ ಗಣಿಗಳ ಪ್ರದೇಶದಲ್ಲಿ ಚಿನ್ನ ಮಿಶ್ರಿತ ಮಣ್ಣನ್ನು ಕೊರೆದು ಚೀಲಗಳಲ್ಲಿ ತುಂಬಿಕೊಂಡು ಕಳವು ಮಾಡುತ್ತಿದ್ದ ಮಹಿಳೆಯರನ್ನು ಉರಿಗಾಂ ಪೊಲೀಸರು ಬಂಧಿಸಿದ್ದಾರೆ.ಉರಿಗಾಂ ಠಾಣಾ ವ್ಯಾಪ್ತಿಗೆ ಸೇರಿದ ಬಿಜಿಎಂಎಲ್‌ಗೆ ಸೇರಿದ ಗಿಲ್ಬರ್ಟ್ ಶಾಫ್ಟ್‌ನ ಹಿಂಭಾಗದಲ್ಲಿ ಸೆಕ್ಯೂರಿಟಿ ಗಾರ್ಡ್ ತ್ಯಾಗವೇಲು ಗಸ್ತು ಮಾಡುತ್ತಿದ್ದಾಗ ಆರೋಪಿಗಳಾದ ಕಾರ್ತಿಕ್, ಶ್ಯಾಮ್ ವಿಜಯ್, ವೇಲಾಂಗಣಿ, ಸೌಂದರಿ, ಸುಜಾತ, ಮೇರಿ, ರಿಚರ್ಡ್ ಎಂಬುವವರು ಬಿಜಿಎಂಎಲ್‌ಗೆ ಸೇರಿದ ಗಿಫ್ಫಾರ್ಟ್ ಶಾಫ್ಟ್ ಕಾಂಪೌಂಡ್‌ಗೆ ಅಳವಡಿಸಿದ್ದ ಕಬ್ಬಿಣದ ಕಂಬಿಗಳಿಂದ ಕೂಡಿದ್ದ ಬೇಲಿಯನ್ನು ಕಿತ್ತು ಒಳಗೆ ಪ್ರವೇಶಿಸಿ ಗಿಫ್ಫಾರ್ಟ್ ಶಾಫ್ಟ್ನ ಹಿಂಭಾಗದಲ್ಲಿ ಬಿದ್ದಿರುವ ಚಿನ್ನ ಮಿಶ್ರಿತ ಮಣ್ಣನ್ನು ಕೊರೆದು ಮೂಟೆಗಳಲ್ಲಿ ತುಂಬಿಸಿಕೊಂಡು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದುದು ಪತ್ತೆಯಾಗಿದ್ದು, ಕೂಡಲೇ ಆರೋಪಿಗಳನ್ನು ಹಿಡಿದು ಉರಿಗಾಂ ಪೊಲೀಸ್ ಠಾಣೆಯಲ್ಲಿ ಹಾಜರುಪಡಿಸಿದ್ದಾರೆ. ಪೊಲೀಸರು ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ 12 ಸಿಮೆಂಟ್ ಮೂಟೆಗಳಲ್ಲಿ ತುಂಬಿಸಿದ್ದ 41 ಸಾವಿರ ಬೆಲೆ ಬಾಳುವ ಚಿನ್ನ ಮಿಶ್ರಿತ ಮಣ್ಣು, 6 ಕಬ್ಬಿಣದ ಕೊಕ್ಕಿಗಳು, 2 ಪ್ಲಾಸ್ಟಿಕ್ ಬಾಣಲಿ, 2 ಸನಿಕೆ, ಒಂದು ಕಬ್ಬಿಣದ ಹಾರೆಯನ್ನು ವಶಪಡಿಸಿಕೊಂಡಿದ್ದಾರೆ.

ಇತ್ತೀಚೆಗೆ ಚಿನ್ನದ ಗಣಿಗಳ ಪ್ರದೇಶದಲ್ಲಿ ಚಿನ್ನದ ಅಧಿರು ಮಿಶ್ರಿತ ಮಣ್ಣಿನ ಎರಡು ಪ್ರಕರಣಗಳು ದಾಖಲಾಗಿದ್ದು, 12 ಸಿಮೆಂಟ್ ಚೀಲಗಳ ಚಿನ್ನ ಮಿಶ್ರಿತ ಮಣ್ಣನ್ನು ವಶಪಡಿಕೊಳ್ಳಲಾಗಿದೆ ಎಂದು ಎಸ್ಪಿ ಶಿವಾಂಶು ರಜಪೂತ್ ತಿಳಿಸಿದ್ದಾರೆ. ಈಗಾಗಲೇ ಚಿನ್ನದ ಗಣಿಗಳ ಪ್ರದೇಶದಲ್ಲಿ ಪೊಲೀಸ್‌ರು ಪಹರೆಯನ್ನು ಬಿಗಿಗೊಳಿಸಲಾಗಿದ್ದು, ಇದರ ಜೊತೆಗೆ ಚಿನ್ನದ ಗಣಿಗಳ ಭದ್ರತಾ ಸಿಬ್ಬಂದಿಗೆ ಕಟ್ಟುನಿಟ್ಟಿನ ಎಚ್ಚರಿಗೆ ನೀಡಿ ನಿಷೇದಿತ ಚಿನ್ನದ ಗಣಿಗಳ ಪ್ರದೇಶದಲ್ಲಿ ಚಿನ್ನದ ಅದಿರು ಮಿಶ್ರಿತ ಮಣ್ಣನ್ನು ತೆಗೆಯಬಾರದೆಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

೨೦ಕೆಜಿಎಫ್೧

ಕಳವು ಮಾಡಿದ್ದ ಮಾಲು ಮತ್ತು ಆರೋಪಿಗಳನ್ನು ಬಂಧಿಸಿರುವ ಉರಿಗಾಂ ಠಾಣೆಯ ಪೊಲೀಸ್ ಅಧಿಕಾರಿಗಳು೨೦ಕೆಜಿಎಫ್೨ಎಸ್ಪಿ ಶಿವಾಂಶು ರಜಪೂತ್.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

೨೩ರಂದು ಜಿ ರಾಮ್ ಜೀ ವಿರೋಧಿಸಿ ಪ್ರತಿಭಟನಾ ಪೂರ್ವಭಾವಿ ಸಭೆ
ಸರ್ವಜ್ಞ ಕವಿಯ ತ್ರಿಪದಿಗಳು ಜನರ ಜೀವನಕ್ಕೆ ದಾರಿದೀಪ