)
ಕನ್ನಡಪ್ರಭ ವಾರ್ತೆ ಬೆಂಗಳೂರು
ಚಿನ್ನಾಭರಣ ಮಾರಾಟ ಮಳಿಗೆಗಳಲ್ಲಿ ದರೋಡೆ, ಸುಲಿಗೆ ಹಾಗೂ ಕಳ್ಳತನ ಕೃತ್ಯಗಳಿಗೆ ಕಡಿವಾಣ ಹಾಕಲು ಬಂದೋಬಸ್ತ್ ವ್ಯವಸ್ಥೆ ಪರಿಶೀಲಿಸುವಂತೆ ಡಿಸಿಪಿ ಡಾ.ವಿಕ್ರಂ ಅಮಟೆ ನೀಡಿದ ಸೂಚನೆ ಹಿನ್ನೆಲೆಯಲ್ಲಿ ಪೂರ್ವ ವಿಭಾಗದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಂಗಡಿಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ಭದ್ರತಾ ಕಾವಲುಗಾರರ ನೇಮಿಸಿಕೊಳ್ಳುವಂತೆ ಸಹ ಮಾಲಿಕರಿಗೆ ಪೊಲೀಸರು ತಾಕೀತು ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಚಿನ್ನಾಭರಣ ಮಾರಾಟ ಮಳಿಗೆಗೆ ದುಷ್ಕರ್ಮಿಗಳು ನುಗ್ಗಿ ದರೋಡೆ ಮಾಡಿದ್ದರು.