ಕನ್ನಡಪ್ರಭ ವಾರ್ತೆ ಮಡಿಕೇರಿ
ಮಡಿಕೇರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗು ಜಿಲ್ಲೆಗೆ ಈ ಬಾರಿ ಲಭ್ಯವಾಗಿರುವ ವಿಶೇಷ ಕೊಡುಗೆಗಳ ದಾಖಲೆಯನ್ನು ವಿವರಿಸಿ ಮಾತನಾಡಿದ ಅವರು ಜನತೆಯ ನಿರೀಕ್ಷೆಗೂ ಮೀರಿ ಜಿಲ್ಲೆಗೆ ಅನುದಾನ ತರುವಲ್ಲಿ ಶಾಸಕದ್ವಯರು ಯಶಸ್ವಿಯಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.
2025-26 ನೇ ಸಾಲಿನ ಬಜೆಟ್ ಅನ್ನು ಅವಲೋಕಿಸಿದಾಗ, ಕೊಡಗು ಜಿಲ್ಲೆಗೆ ಘೋಷಣೆಯಾಗಿರುವ ವಿಶೇಷ ಕೊಡುಗೆಗಳನ್ನು ಗಮನಿಸಿದಾಗ ಕೊಡಗಿನ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ ಮಂತರ್ ಗೌಡ ರವರು ತಾವು ರೂಢಿಯೊಳಗೆ ಉತ್ತಮರು ಎಂದು ಸಾಬೀತು ಪಡಿಸಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಶಾಸಕದ್ವಯರ ಪರಿಶ್ರಮ, ಕ್ರಿಯಾಶೀಲತೆ ಹಾಗೂ ಬದ್ದತೆಯ ಪರಿಣಾಮ 2025-26 ರ ರಾಜ್ಯ ಬಜೆಟ್ ನಲ್ಲಿ 1800 ಕೋಟಿ ರು. ಗಳಿಗೂ ಹೆಚ್ಚಿನ ಭರಪೂರ ಅನುದಾನವನ್ನು ಮಾನ್ಯ ಮುಖ್ಯಮಂತ್ರಿ ಗಳಾದ ಸಿದ್ದರಾಮಯ್ಯ ನವರು ಘೋಷಣೆ ಮಾಡಿದೆ. ಹಾಗಾಗಿ ಈ ಬಾರಿಯ ಬಜೆಟ್ ಕೊಡಗಿನ ಪಾಲಿಗೆ ಗೋಲ್ಡನ್ ಬಜೆಟ್ ಆಗಿ ಇತಿಹಾಸ ನಿರ್ಮಿಸಿದೆ.
ವಿರಾಜಪೇಟೆಗೆ 250 ಕೋಟಿ ರು. ವೆಚ್ಚದ ಜಿಲ್ಲಾಸ್ಪತ್ರೆ ದರ್ಜೆಯ 400 ಬೆಡ್ ಸಾಮರ್ಥ್ಯದ ಆಸ್ಪತ್ರೆ, 75 ಕೋಟಿ ವೆಚ್ಚದಲ್ಲಿ ಕುಶಾಲ ನಗರ ಆಸ್ಪತ್ರೆ ಆಧುನೀಕರಣ, 65 ಕೋಟಿ ರು. ವೆಚ್ಚದಲ್ಲಿ ಪೊನ್ನಂಪೇಟೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಸ್ಥಾಪನೆಗೆ ಬಜೆಟ್ ನಲ್ಲಿ ಘೋಷಣೆ ಮಾಡಿದೆ.
ಆದಿವಾಸಿ ಜನಾಂಗಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು 33.5 ಕೋಟಿ ರು. ಗಳನ್ನು ಒದಗಿಸಲಾಗಿದೆ. ಭೂ ಕುಸಿತ ತಡೆಯಲು ತಡೆಗೋಡೆ ನಿರ್ಮಾಣ ಕಾರ್ಯಕ್ಕೆ 50 ಕೋಟಿ ರು. ಮೀಸಲಿಡಲಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಜಿಲ್ಲೆಗೆ ಐದು ಕೋಟಿ ರು. ಗಳ ಅನುದಾನ ನೀಡಲಾಗಿದೆ.
ಇವು ವಿಶೇಷ ಅನುದಾನಗಳಾಗಿದ್ದರೆ ಸಾಮಾನ್ಯ ಕಾರ್ಯಕ್ರಮಗಳಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕ್ರೀಡಾ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ, ಮುಜರಾಯಿ ಇಲಾಖೆ, ಸೇರಿದಂತೆ ಎಲ್ಲಾ ಇಲಾಖೆಗಳಿಂದ ಹಿಂದಿನ ವರ್ಷಗಳಿಗಿಂತಲೂ ಅತ್ಯಧಿಕ ಅನುದಾನಗಳನ್ನು ಮೀಸಲಿಡಲಾಗಿದೆ.
ಕೊಡಗು ವಿ.ವಿ ಬಗ್ಗೆ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಧನಾತ್ಮಕವಾಗಿ ಅಭಿಪ್ರಾಯ ಹೊಂದಿದೆ. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾದ ಯಾವುದೇ ಪೂರ್ವ ಸಿದ್ದತೆ ಇಲ್ಲದೆ ವಿಶ್ವವಿದ್ಯಾಲಯ ಸ್ಥಾಪನೆ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಚೆಲ್ಲಾಟವಾಡಿದೆ.
ಇದನ್ನು ರಾಜಕೀಯ ಲಾಭ ಮಾಡಿಕೊಳ್ಳಲು ಬಿಜೆಪಿ ಪ್ರಯತ್ನ ಪಡುತ್ತಿರುವುದ ಅವರ ಭಂಡತನ ವನ್ನು ಹೊರಹಾಕಿದೆ. ಪ್ರತಿಭಟನೆಯಲ್ಲಿ ಕೆಲವು ರೌಡಿ ಶೀಟರ್ ಗಳು ಮನ ಬಂದಂತೆ ಶಾಸಕರ ಬಗ್ಗೆ ಅವಹೇಳನಕರ ಪದ ಪ್ರಯೋಗ ಮಾಡಿರುವುದು ಅವರ ನೈತಿಕ ಮಟ್ಟ ಎಷ್ಟು ಕುಸಿದಿದೆ ಎಂಬುದನ್ನು ತೋರಿಸುತ್ತದೆ.