ಗೊಲ್ಲಹಳ್ಳಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ

KannadaprabhaNewsNetwork |  
Published : May 07, 2026, 01:30 AM IST
ಪೋಟೋ 3 :ಗೊಲ್ಲಹಳ್ಳಿ-ದೊಡ್ಡಬಳ್ಳಾಪುರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಎನ್.ಶ್ರೀನಿವಾಸ್ ಚಾಲನೆ ನೀಡಿದರು | Kannada Prabha

ಸಾರಾಂಶ

ದಾಬಸ್‍ಪೇಟೆ: ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಗೊಲ್ಲಹಳ್ಳಿ-ದೊಡ್ಡಬಳ್ಳಾಪುರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ್ದೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು

ದಾಬಸ್‍ಪೇಟೆ: ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಗೊಲ್ಲಹಳ್ಳಿ-ದೊಡ್ಡಬಳ್ಳಾಪುರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ್ದೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

2016ರಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಮಹಾದೇವಪ್ಪ ಅವಧಿಯಲ್ಲಿ ಈ ರಸ್ತೆ ಕಾಮಗಾರಿ ಪ್ರಾರಂಭವಾಗಿದ್ದು, 2018ರವರೆಗೆ ಕಾಮಗಾರಿ ವೇಗವಾಗಿ ನಡೆಯಿತು. ನಂತರ ಬಂದ ಕುಮಾರಸ್ವಾಮಿ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಿದ್ದು, ಮೈತ್ರಿ ಸರ್ಕಾರದ ಶಾಸಕರಿದ್ದರೂ ಕಾಮಗಾರಿ ನಡೆಯದೇ ಸ್ಥಗಿತಗೊಂಡಿತ್ತು. ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಬಂದ ನಂತರವೇ ಈ ಕಾಮಗಾರಿಗೆ ವೇಗ ದೊರೆತಿದೆ ಎಂದರು.

ರಸ್ತೆ ಸಮಸ್ಯೆಯನ್ನು ಸರಿಪಡಿಸಲಿಲ್ಲ ಎಂದು ನನ್ನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಅರ್ಥೈಸಲಾಗುತ್ತಿತ್ತು. ಬಿಜೆಪಿ ಸರ್ಕಾರದವಿದ್ದಾಗ, ಜೆಡಿಎಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಜನರ ಬಗ್ಗೆ ಕಾಳಜಿ ಇರಲಿಲ್ವಾ, ಬಿಜೆಪಿ-ಜೆಡಿಎಸ್ ಘಟಾನುಘಟಿ ನಾಯಕರಿದ್ದರೂ ಯಾಕೆ ಮಾಡಿಸಲಿಲ್ಲ, ದೊಡ್ಡ ದೊಡ್ಡ ಹುದ್ದೆಗಳನ್ನು ಅನುಭವಿಸುವಾಗ ಈ ಕಾಮಗಾರಿ ನೆನೆಪಿಗೆ ಬರಲಿಲ್ಲವಾ, ಸರ್ಕಾರದ ಮೇಲೆ ಒತ್ತಡ ತಂದು ಕೆಲಸ ಮಾಡಬೇಕಿತ್ತು ಎಂದು ವಿರೋಧ ಪಕ್ಷಗಳ ವಿರುದ್ಧ ಶಾಸಕರು ಹರಿಹಾಯ್ದರು. 1500 ಕೋಟಿ ಅನುದಾನ, ಒಳಚರಂಡಿ ಅನುದಾನ, ಕಾವೇರಿ ನೀರಿ ಹರಿಸಲು ಯೋಜನೆಗೆ ಚಾಲನೆ ನೀಡಿಸಿದ್ದಾನೆ.

ಈ ಸಂದರ್ಭದಲ್ಲಿ ಎನ್‌ಪಿಎ ಅಧ್ಯಕ್ಷ ಎಂ.ಕೆ.ನಾಗರಾಜು, ನಗರಸಭೆ ಅಧ್ಯಕ್ಷ ಗಣೇಶ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ವಕೀಲ ಮುರಳಿ, ಮುಖಂಡ ಸೋಮಶೇಖರ್ ಇತರರು ಉಪಸ್ಥಿತರಿದ್ದರು.

ಪೋಟೋ 3 :ಗೊಲ್ಲಹಳ್ಳಿ-ದೊಡ್ಡಬಳ್ಳಾಪುರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಶ್ರೀನಿವಾಸ್ ಚಾಲನೆ ನೀಡಿದರು. ಎನ್‌ಪಿಎ ಅಧ್ಯಕ್ಷ ಎಂ.ಕೆ.ನಾಗರಾಜು, ನಗರಸಭೆ ಅಧ್ಯಕ್ಷ ಗಣೇಶ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಲಿತಾಂಶ ರದ್ದು ಪಡಿಸಿ ಪ್ರಜಾಪ್ರಭುತ್ವ ಎತ್ತಿ ಹಿಡಿಯಲಿ: ಎಂ.ಆರ್.ರವಿಶಂಕರ್ ಆಗ್ರಹ
ವೀರ ಯೋಧರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು