ಭಟ್ಕಳ: ಪಟ್ಟಣದ ಆಸರಕೇರಿಯ ತಿರುಮಲ ವೆಂಕಟ್ರಮಣ ದೇವಸ್ಥಾನದ ಸಭಾಭವನದಲ್ಲಿ ತಾಲೂಕು ನಾಮಧಾರಿ ಶಿಕ್ಷಣಪ್ರೇಮಿಗಳ ಸಂಘದಿಂದ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಾಮಧಾರಿ ಸಮಾಜದ ಹಿರಿಯ ಮುಖಂಡ ಡಿ.ಬಿ. ನಾಯ್ಕ ಉದ್ಘಾಟಿಸಿದರು.
ಶಿರಾಲಿ ಸಾರದಹೊಳೆ ಶ್ರೀ ಹಳೆಕೋಟೆ ಹನುಮಂತ ದೇವಸ್ಥಾನದ ಆಡಳಿ ಮಂಡಳಿಯ ಅಧ್ಯಕ್ಷ ಆರ್.ಕೆ. ನಾಯ್ಕ ಮಾತನಾಡಿ, ನಾಮಧಾರಿ ಸಮಾಜವನ್ನು ಎಚ್ಚರಿಸುವ ಕೆಲಸವನ್ನು ಶಿಕ್ಷಣಪ್ರೇಮಿಗಳು ಮಾಡಿದ್ದಾರೆ ಎಂದರು.
ವಿಶ್ರಾಂತ ಜಿಲ್ಲಾ ನ್ಯಾಯಾಧೀಶ ರವಿ ಎಂ. ನಾಯ್ಕ, ಶಿಕ್ಷಣ ಪ್ರೇಮಿಗಳ ಸಂಘದ ಪ್ರಮುಖ ಭವಾನಿಶಂಕರ ನಾಯ್ಕ, ಅಧ್ಯಕ್ಷತೆ ವಹಿಸಿದ್ದ ರಾಘವೇಂದ್ರ ನಾಯ್ಕ ಮಾತನಾಡಿದರು. ಸಹಕಾರಿ ಧುರೀಣ ಈರಪ್ಪ ಗರಡಿಕರ್, ಕಸಾಪ ಘಟಕದ ಅಧ್ಯಕ್ಷ ಗಂಗಾಧರ ನಾಯ್ಕ ಉಪಸ್ಥಿತರಿದ್ದರು.ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯರಾದ ಡಿ.ಬಿ. ನಾಯ್ಕ, ಶ್ರೀ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೆ.ಆರ್. ನಾಯ್ಕ ಹಾಗೂ ನಿವೃತ್ತ ಕೃಷಿ ಅಧಿಕಾರಿ ಜಿ.ಎನ್. ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯ ಮಟ್ಟದಲ್ಲಿ ೮ನೇ ರ್ಯಾಂಕ್ ಪಡೆದ ನಾಮಧಾರಿ ಹೆಮ್ಮೆ ಪ್ರಶಸ್ತಿಯನ್ನು ಮುರುಡೇಶ್ವರದ ಸಿಂಚನಾ ಮಂಜುನಾಥ ನಾಯ್ಕ ಪಡೆದರು. ಎಸ್ಸೆಸ್ಸೆಲ್ಸಿ ಹಾಗೂ ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ತಾಲೂಕಿನ ಒಟ್ಟೂ ೧೩೨ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಮಂಜುನಾಥ ನಾಯ್ಕ ಪ್ರಾರ್ಥನೆ ಹಾಡಿದರು. ಪಾಂಡುರಂಗ ನಾಯ್ಕ ಸ್ವಾಗತಿಸಿದರು. ಶಿವಾನಂದ ನಾಯ್ಕ ಪ್ರಾಸ್ತಾವಿಕರವಾಗಿ ಮಾತನಾಡಿದರು. ದಿನೇಶ ನಾಯ್ಕ ವಂದಿಸಿದರು. ಶಿಕ್ಷಕರಾದ ನಾರಾಯಣ ನಾಯ್ಕ ಹಾಗೂ ಪರಮೇಶ್ವರ ನಾಯ್ಕ ನಿರೂಪಿಸಿದರು.