ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಪುರಸಭೆ,ಅರಣ್ಯ ಇಲಾಖೆ ಆಶ್ರಯದಲ್ಲಿ ನಡೆದ ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಹಲವಾರು ಸಾಂಕ್ರಮಿಕ ರೋಗಗಳು ಹರಡುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಸ್ವಚ್ಛತೆ ಬಗ್ಗೆ ಎಚ್ಚರಕೆ ವಹಿಸಿದರೇ ಮಾತ್ರ ರೋಗದಿಂದ ಮುಕ್ತಿ ಪಡೆಯಲು ಸಾಧ್ಯ ಎಂದರು.
ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ಸುಂದರ್ ಮಾತನಾಡಿ, ಅಶುಚಿತ್ವ ಹೊಂದಿರುವ ಪ್ರದೇಶಗಳಲ್ಲಿ ಸೊಳ್ಳೆಗಳು ಹೆಚ್ಚು ಉತ್ಪತ್ತಿಯಾಗಿ ಡೆಂಘೀ, ಮಲೇರಿಯಾ ಸೇರಿದಂತೆ ಇತರೆ ಸಾಂಕ್ರಮಿಕ ಮಾರಕ ರೋಗ ಹರಡುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.ನಾವು ಹೇಗೆ ಪ್ರತಿನಿತ್ಯ ಸ್ವಚ್ಛವಾಗಿರುತ್ತೇವೋ ಅದೇ ರೀತಿ ನಮ್ಮ ಮನೆ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಂಡು ಉತ್ತಮ ಪರಿಸರ ಹೊಂದಬೇಕು. ಮನಸ್ಸು ಸುದ್ದಿಯಾದರೇ ಸಾಲದು, ವಾತಾವರಣವು ಚೆನ್ನಾಗಿದ್ದರೇ ನಾವು ಆರೋಗ್ಯವಾಗಿರುತ್ತೇವೆ ಎಂದರು.
ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿ, ಅಧಿಕಾರ ವಹಿಸಿಕೊಂಡ ನಂತರ ದೊಡ್ಡಕೆರೆ ಪಾರ್ಕ್, ನ್ಯಾಯಾಲಯ, ಪಟ್ಟಣದ ಪಾರ್ಕಿಂಗ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗಿದೆ, ಪಟ್ಟಣವನ್ನು ಸುಂದರವಾಗಿಸುವುದರ ಜೊತೆಗೆ ಮೂಲ ಸೌಲಭ್ಯ ಕಲ್ಪಿಸುವುದು ನಮ್ಮ ಗುರಿಯಾಗಿದೆ ಎಂದರು.