ಸೂಲಿಬೆಲೆ: ಪ್ರತಿನಿತ್ಯ ಸಣ್ಣ- ಪುಟ್ಟ ವ್ಯಾಯಾಮಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಪಡೆಯಬಹುದು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ಮಾನಸಿಕ ನೆಮ್ಮದಿಯಿಂದ ಸದೃಢ ಆರೋಗ್ಯ ಪಡೆಯಬಹುದು ನಿರಂತರ ಕಾರ್ಯಭಾರ ಜೀವನ, ಒತ್ತಡದ ಜೀವನದಿಂದ ಹಾಗೂ ಗುಣಮಟ್ಟದವಲ್ಲದ ಆಹಾರ ಸೇವನೆಯಿಂದ ಆರೋಗ್ಯ ಮೇಲೆ ದುಷ್ಪರಿಣಾಮ ಬೀರಲಿದೆ, ಇದನ್ನು ಸುಧಾರಣೆ ಮಾಡಿಕೊಳ್ಳಬೇಕು ಎಂದರು.
ಪ್ರಕೃತಿ ದತ್ತವಾಗಿ ನೀಡಿರುವ ನೀರು, ಗಾಳಿ, ಆಹಾರ ವಿಷವಾಗುತ್ತಿದೆ, ರಾಗಿ ಬೆಳೆಗೂ ಔಷಧಿ ಸಿಂಪಡಿಸುವ ಕಾಲ ಬಂದಿದ್ದು, ಉತ್ತಮ ಆಹಾರ ಸೇವೆ ಮಾಡಬೇಕು, ಸದೃಢ ಆರೋಗ್ಯದಿಂದ ಬಲಿಷ್ಠ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಬಾಲೇನಹಳ್ಳಿ ಗ್ರಾಮದ ಜನರು ಸರ್ಕಾರಿ ಬಸ್ ವ್ಯವಸ್ಥೆಯನ್ನು ಕಲ್ಪಿಸುವಂತೆ ಮನವಿ ಸಲ್ಲಿಸಿದ್ದು, ಶೀಘ್ರ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುವುದು. ಕ್ರಿಶ್ಚಿಯನ್ ಸಮುದಾಯದ ಕಲ್ವಾರಿ ಚರ್ಚ್ ಅಭಿವೃದ್ಧಿಗೆ ಹಾಗೂ ಸಮುದಾಯದ ಏಳಿಗೆಗೆ ಅವಶ್ಯಕತೆ ಇರುವ ವಿಷಯವನ್ನು ಇಲಾಖೆಯ ಗಮನಕ್ಕೆ ತಂದು ಅಲ್ಪಸಂಖ್ಯಾತ ಇಲಾಖೆಯಿಂದ ಸವಲತ್ತುಗಳನ್ನು ಕಲ್ಪಿಸಿಕೊಡಲಾಗುವುದು ಎಂದು ಶಾಸಕರು ತಿಳಿಸಿದರು.ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ.ಸತೀಶಗೌಡ ಮಾತನಾಡಿದರು.