ಧಾರವಾಡ:
ಇಲ್ಲಿನ ಕರ್ನಾಟಕ ಕಾಲೇಜಿನ ಕಾವೇರಿ ವಿದ್ಯಾರ್ಥಿ ವಸತಿ ನಿಲಯ ಮತ್ತು ಕಾಲೇಜಿನ ಲೇಡೀಸ್ ಅಸೋಸಿಯೇಷನ್ ಸಹಯೋಗದಲ್ಲಿ ಕಾವೇರಿ ವಿದ್ಯಾರ್ಥಿನಿಯರ ವಸತಿ ನಿಲಯದ ಸಭಾಂಗಣದಲ್ಲಿ ವಿದ್ಯಾರ್ಥಿನಿಯರಲ್ಲಿ ಆರೋಗ್ಯ ಸಮಸ್ಯೆಗಳು ಮತ್ತು ಪರಿಹಾರೋಪಾಯಗಳು ಸಂವಾದದಲ್ಲಿ ಮಾತನಾಡಿದರು.
ಹದಿಹರೆಯದ ಯುವತಿಯರಲ್ಲಿ ಅನೇಕ ಆರೋಗ್ಯ ಸಮಸ್ಯೆ ಕಾಣುತ್ತಿದ್ದೇವೆ. ಈ ನಿಟ್ಟಿನಲ್ಲಿ ಸಮತೋಲನ ಆಹಾರ ಸೇವಿಸಬೇಕು. ಹಸಿರು ತರಕಾರಿ, ಹಣ್ಣು, ಕಾಳು, ಹಾಲಿನ ಉತ್ಪನ್ನ ಊಟದ ತಟೆಯಲ್ಲಿ ಇರಬೇಕು. ವೈಯಕ್ತಿಕ ಶುಚಿತ್ವಕ್ಕೆ ಹೆಚ್ಚು ಮಹತ್ವ ನೀಡಬೇಕು ಎಂದರು.ಇಂದು ಸಾಮಾನ್ಯವಾಗಿ ಯುವತಿಯರು ರಕ್ತಹೀನತೆಯ ಸಮಸ್ಯೆಗೆ ಒಳಗಾಗುತ್ತಿದ್ದು, ಆರೋಗ್ಯದ ಗುಟ್ಟು ಪರಿಪೂರ್ಣವಾದ ಪೋಷಕಾಂಶ ಹೊಂದಿದ ಆಹಾರ ತೆಗೆದುಕೊಳ್ಳುಬೇಕು ಎಂದರು.
ಇದೇ ವೇಳೆ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಯಾನೇಟರಿ ಪ್ಯಾಡ್ ವಿತರಿಸಲಾಯಿತು. ಕರ್ನಾಟಕ ಕಲಾ ಕಾಲೇಜಿನ ವಿಭಾವರಿ ಕುಲಕರ್ಣಿ, ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಡಾ. ಸ್ಟೆಲ್ಲಾ ಸ್ಟಿವನ್, ಕಾವೇರಿ ವಸತಿ ನಿಲಯದ ಡಾ. ಅನ್ನಪೂರ್ಣ. ಎಸ್, ನೇತ್ರಾ, ಸಂಗೀತಾ ಮತ್ತು ವೀಣಾ ಇದ್ದರು.
13ಡಿಡಬ್ಲೂಡಿ2ಕರ್ನಾಟಕ ಕಾಲೇಜಿನ ಕಾವೇರಿ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಗೆ ಸ್ಯಾನೇಟರಿ ಪ್ಯಾಡ್ ವಿತರಿಸಲಾಯಿತು.