ಅಮೃತೇಶ್ವರ ಪ್ರೌಢಶಾಲೆಯಲ್ಲಿ ಯೋಗ ದಿನ । ಸಾಧಕರಿಗೆ ಸನ್ಮಾನ
ಯೋಗದ ಅಳವಡಕೆಯಿಂದ ಉತ್ತಮ ಆಯುರಾರೋಗ್ಯ ಹೊಂದಬಹುದು ಎಂದು ಕುರುಬರಹಳ್ಳಿ ಯೋಗ ಮತ್ತು ಆಧ್ಯಾತ್ಮಿಕ ಕೇಂದ್ರದ ಮುಖ್ಯಸ್ಥ ಶ್ರೀ ರಾಮು ಗುರೂಜಿ ಹೇಳಿದ್ದಾರೆ.
ಸಮೀಪದ ನೇರಲಕೆರ ಶ್ರೀ ಅಮೃತೇಶ್ವರ ಪ್ರೌಢಶಾಲಾ ಆವರಣದಲ್ಲಿ ಶನಿವಾರ ಏರ್ಪಾಡಾಗಿದ್ದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡುತ್ತಿದ್ದರು.ಯೋಗದಿಂದ ಉತ್ತಮ ಜೀವನ ಕ್ರಮವನ್ನು ಅನುಸರಿಸಬಹುದು. ದಿನಂಪ್ರತಿ ಉಲ್ಲಾಸದಿಂದ ಜೀವನ ನೆಡೆಸಬಹುದು ಎಂದು ಹೇಳಿದರು.
ಸ್ಥಳೀಯ ಸಲಹಾ ಸಮಿತಿ ಉಪಾಧ್ಯಕ್ಷರಾದ ಷಡಕ್ಷರಪ್ಪ ಮಾತನಾಡಿ, ಯೋಗ ಆಚರಣೆಯ ಮೂಲಕ ಅಸ್ತಮ ಇತ್ಯಾದಿ ಖಾಯಿಲೆಗಳನ್ನು ತಡೆಗಟ್ಟಬಹುದು ಎಂಬುದನ್ನು ತಿಳಿಸಿದರು.
ಸ್ಥಳೀಯ ಸಲಹಾ ಸಮಿತಿ ಸದಸ್ಯರಾದ ಪುಟ್ಟಪ್ಪ ಟಿ ಅವರು ಮಾತನಾಡಿ, ಯೋಗ ಆಚರಣೆಗಳ ಮೂಲಕ ಜನರಲ್ಲಿ ಆರೋಗ್ಯದ ಅರಿವನ್ನು ಮೂಡಿಸಲು ಮತ್ತು ಸದಾನಿರೋಗಿಗಳಾಗಿ ಇರಲು ಪ್ರೇರೇಪಿಸಬಹುದು ಎಂದು ಹೇಳಿದರು.ಶಾಲೆಯ ಮುಖ್ಯೋಪಾಧ್ಯಾಯ ಹಾಲೇಶ್ ಕೆ.ಟಿ. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಆಚರಣೆಯ ಔಚಿತ್ಯವನ್ನು ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಶ್ರೀ ಅಮೃತೇಶ್ವರ ಪ್ರೌಢಶಾಲೆಯ ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷರಾದ ಮಲಿಕಾರ್ಜುನಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂತಹ ಅದ್ಭುತವಾದ ಕಾರ್ಯಕ್ರಮ ಮಾಡಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಉಚಿತ ಟಿ ಶರ್ಟ್ಸ್ಗಳನ್ನು ಕೊಡುಗೆಯಾಗಿ ನೀಡಿದ ಮಲ್ಲಿಕಾರ್ಜುನ್ ಎನ್ ಬಿ.ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ 2024-25ನೇ ಸಾಲಿನಲ್ಲಿ ಹತ್ತನೇ ತರಗತಿ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದಿರುವ ಮೊದಲ ಮೊದಲ ಮೂವರು ಮಕ್ಕಳನ್ನು ಟ್ರೋಪಿಗಳನ್ನು ನೀಡುವ ಮೂಲಕ ಸನ್ಮಾನಿಸಲಾಯಿತು.ಶಾಲೆಗೆ ಉತ್ತಮ ಫಲಿತಾಂಶ ತಂದುಕೊಟ್ಟಿರುವ ಶ್ರೀ ಅಮೃತೇಶ್ವರ ಪ್ರೌಢಶಾಲೆಯ ಎಲ್ಲ ಸಿಬ್ಬಂದಿಯವರನ್ನು ಸ್ಥಳೀಯ ಸಲಹಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯ ಹಾಲೇಶ್ ಕೆ ಟಿ ರವರಿಗೆ ಸಮಗ್ರ ಲಿಂಗಾಯತ ವೇದಿಕೆ ಟ್ರಸ್ಟ್ ವತಿಯಿಂದ ವಿದ್ಯಾಕ್ರಾಂತಿ ಪ್ರಶಸ್ತಿ ನೀಡಿ ಸನ್ಮಾನಲಾಯಿತು.ನೇರಲಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೇಮಶೇಖರಪ್ಪ, ಸದಸ್ಯರು, ಶ್ರೀ ಅಮೃತೇಶ್ವರ ಪ್ರೌಢಶಾಲೆಯ ಸ್ಥಳೀಯ ಸಲಹಾ ಸಮಿತಿ ಪದಾಧಿಕಾರಿಗಳು, ಗ್ರಾಮಸ್ಥರು, ಸುತ್ತಮುತ್ತಲ ಗ್ರಾಮಸ್ಥರು, ಯೋಗಸಾಧಕರಾದ ಶಾರದಮ್ಮ ಮತ್ತು ನವೀನ್, ದೈಹಿಕ ಶಿಕ್ಷಕರಾದ ಪಂಚಾಕ್ಷರಪ್ಪ, ಸವಿತಮ್ಮ, ಸತೀಶ್ ನಂದಿಹಳ್ಳಿ ಭಾಗವಹಿಸಿದ್ದರು.