ಕನ್ನಡಪ್ರಭ ವಾರ್ತೆ ಹೂವಿನಹಡಗಲಿ
ಪಟ್ಟಣದ ಸೊಪ್ಪಿನ ಕಾಳಮ್ಮನವರ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಪಾಲಕ, ಪೋಷಕರ ಸಭೆಯಲ್ಲಿ ಮಾತನಾಡಿದರು.
ಶೈಕ್ಷಣಿಕ ಜೀವನದಲ್ಲಿ ಪಿಯುಸಿ ಪ್ರಮುಖ ಘಟ್ಟವಾಗಿದ್ದು, ಪರೀಕ್ಷೆಗೆ ಉಳಿದ ದಿನಗಳಲ್ಲಿ ಆಸಕ್ತಿಯಿಂದ ಅಭ್ಯಾಸ ಮಾಡಬೇಕೆಂದು ಹೇಳಿದರು.ಬದಲಾದ ಪರೀಕ್ಷಾ ಪದ್ಧತಿ ವಿದ್ಯಾರ್ಥಿಗಳಿಗೆ ವರದಾನವಾಗಿದೆ. ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಉಪನ್ಯಾಸಕ ಬಸೆಟ್ಟಿ ಪ್ರಕಾಶ್ ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕರಾದ ಮಹೇಂದ್ರ ಬಾರಿಕರ, ಸಾಬುದ್ದಿನ್ ಸಾಹೇಬ್, ಶಿವಕುಮಾರ, ಶ್ರೀಕಾಂತ್ ಬಂಡಿಹಾಳ್, ಆರತಿ, ಮಾಬುಸಾಬ್, ಶಂಕರ್, ಪರಶುರಾಮ ನಾಗೋಜಿ ಸಭೆಯಲ್ಲಿ ಹಾಜರಿದ್ದರು. ಉಪನ್ಯಾಸಕ ನಟರಾಜ ಪಾಟೀಲ್ ಕಾರ್ಯಕ್ರಮ ನಿರ್ವಹಿಸಿದರು.