ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆ: ಮಹಿಳೆ ಗಂಭೀರ ಗಾಯ

KannadaprabhaNewsNetwork |  
Published : Jul 07, 2026, 03:00 AM IST
 | Kannada Prabha

ಸಾರಾಂಶ

ಕೊಡಗು ಜಿಲ್ಲೆಯಾದ್ಯಂತ ಸೋಮವಾರ ಉತ್ತಮ ಮಳೆ ಸುರಿದಿದೆ. ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗಿದೆ.

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಸೋಮವಾರ ಉತ್ತಮ ಮಳೆ ಸುರಿದಿದೆ. ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗಿದೆ. ಮಳೆಯಿಂದಾಗಿ ವಿರಾಜಪೇಟೆ ಹೋಬಳಿಯಲ್ಲಿ ಚಲಿಸುತ್ತಿದ್ದ ಸ್ಕೂಟಿ ಮೇಲೆ ಮರ ಬಿದ್ದು ಸವಾರೆ, ಬೇಟೋಳಿ ಗ್ರಾಮದ ನಿವಾಸಿ ಮಹಿಳೆ ಸಿಂಧು ಪ್ರಾಣಾಪಾಯ ದಿಂದ ಪಾರಾಗಿದ್ದಾರೆ. ಗಾಯಗೊಂಡಿರುವ ಅವರನ್ನು ವಿರಾಜಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.ಭಾರೀ ಮಳೆಗೆ ಗೋಣಿಕೊಪ್ಪ ಕುಂದಾ ಗ್ರಾಮದ ಬಸವೇಶ್ವರ ಕಾಲೋನಿ ಸಂಪರ್ಕಿಸುವ ಸೇತುವೆ ಮುಳುಗಿದ್ದು, ಅದರ ಮೇಲೆ ಅಂದಾಜು 2 ಅಡಿಯಷ್ಟು ನೀರು ಹರಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಗೋಣಿಕೊಪ್ಪ ಪೋಲಿಸ್ ಠಾಣೆ ವತಿಯಿಂದ ಸೇತುವೆ ಮುಂಭಾಗದಲ್ಲಿ ಆಡ್ಡಲಾಗಿ ಬ್ಯಾರಿಕೇಡ್ ಅಳವಡಿಸಿ ಸಂಚಾರ ನಿರ್ಬಂಧಿಸಲಾಗಿದೆ.

ಮಡಿಕೇರಿ-ಚೆಟ್ಟಳ್ಳಿ ರಸ್ತೆಯ ಅಡ್ಡಲಾಗಿ ಮರ ಬಿದ್ದ ಪರಿಣಾಮ ಕೆಲ ಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಮರ ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅವಕಾಶ ಮಾಡಲಾಯಿತು.ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 31.97 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ 29.40 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ 53.15 ಮಿ.ಮೀ, ಪೊನ್ನಂಪೇಟೆ ತಾಲೂಕಿನಲ್ಲಿ 46.26 ಮಿ.ಮೀ, ಸೋಮವಾರಪೇಟೆ ತಾಲೂಕಿನಲ್ಲಿ 24.25 ಮಿ.ಮೀ, ಕುಶಾಲನಗರ ತಾಲೂಕಿನಲ್ಲಿ 6.80 ಮಿ.ಮೀ. ಮಳೆಯಾಗಿದೆ.

ಹೋಬಳಿವಾರು ವಿವರ: ಮಡಿಕೇರಿ 16, ನಾಪೋಕ್ಲು 12.40, ಸಂಪಾಜೆ 12, ಭಾಗಮಂಡಲ 77.20, ವಿರಾಜಪೇಟೆ 58.80, ಅಮ್ಮತ್ತಿ 47.50, ಹುದಿಕೇರಿ 38, ಶ್ರೀಮಂಗಲ 60, ಪೊನ್ನಂಪೇಟೆ 75, ಬಾಳೆಲೆ 12.05, ಸೋಮವಾರಪೇಟೆ 15, ಶನಿವಾರಸಂತೆ 18, ಶಾಂತಳ್ಳಿ 37, ಕೊಡ್ಲಿಪೇಟೆ 27, ಕುಶಾಲನಗರ 3.60, ಸುಂಟಿಕೊಪ್ಪ 10 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯ ಮಟ್ಟ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2835.92 ಅಡಿಗಳು. ಇಂದಿನ ನೀರಿನ ಒಳಹರಿವು 1344 ಕ್ಯುಸೆಕ್, ಹೊರ ಹರಿವು ನದಿಗೆ 180 ಕ್ಯುಸೆಕ್.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಂದಾಪ್ರ ಕನ್ನಡ ಉಳಿವಿಗೆ ಸಮೂಹ ಪ್ರಯತ್ನ: ಜಯಪ್ರಕಾಶ ಹೆಗ್ಡೆ
ಉದ್ಯೋಗಾಕಾಂಕ್ಷಿಗಳು ಕೌಶಲ್ಯ ಬೆಳೆಸಿ: ಸುನಿಲ್ ಕುಮಾರ್