ಪ್ರಾಥಮಿಕ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಿಗೆ ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ

KannadaprabhaNewsNetwork |  
Published : Nov 22, 2025, 01:30 AM IST
ಪ್ರಾಥಮಿಕ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಿಗೆ ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ | Kannada Prabha

ಸಾರಾಂಶ

ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಉತ್ಸಾಹಭರಿತವಾಗಿ ಮತ್ತು ಯಶಸ್ವಿಯಾಗಿ ಮುಕ್ತಾಯಗೊಂಡಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್‌ ತಿಳಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ಅನೇಕ ರೀತಿಯ ಪ್ರತಿಭೆಗಳು ಅಡಗಿರುವುದು ಸಾಮಾನ್ಯ. ಆ ಪ್ರತಿಭೆಗಳನ್ನು ಗುರುತಿಸಿ ಬೆಳಕುಹೊಮ್ಮಿಸಲು ಅವಕಾಶ ಕಲ್ಪಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ದೇಶ ಎಂದು ಹೇಳಿದರು. ಕ್ಲಸ್ಟರ್‌, ಹೋಬಳಿ, ತಾಲೂಕು ಹಾಗೂ ಜಿಲ್ಲಾ ಹಂತಗಳಲ್ಲಿ ಯಶಸ್ವಿಯಾಗುವ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶವಿದೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಉತ್ಸಾಹಭರಿತವಾಗಿ ಮತ್ತು ಯಶಸ್ವಿಯಾಗಿ ಮುಕ್ತಾಯಗೊಂಡಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್‌ ತಿಳಿಸಿದ್ದಾರೆ.

ಮುಂದಿನ ಹಂತವಾದ ಪ್ರೌಢಶಾಲೆಗಳ ತಾಲೂಕು ಮಟ್ಟದ ಸ್ಪರ್ಧೆಗಳು ನವೆಂಬರ್ 24ರಂದು ನಗರದ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಯಲಿದೆ. ತರಳಬಾಳು ಶಾಲಾ ಆವರಣದಲ್ಲಿ ನಡೆದ ಪ್ರಾಥಮಿಕ ವಿಭಾಗದ ಸ್ಪರ್ಧೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಅನೇಕ ರೀತಿಯ ಪ್ರತಿಭೆಗಳು ಅಡಗಿರುವುದು ಸಾಮಾನ್ಯ. ಆ ಪ್ರತಿಭೆಗಳನ್ನು ಗುರುತಿಸಿ ಬೆಳಕುಹೊಮ್ಮಿಸಲು ಅವಕಾಶ ಕಲ್ಪಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ದೇಶ ಎಂದು ಹೇಳಿದರು. ಕ್ಲಸ್ಟರ್‌, ಹೋಬಳಿ, ತಾಲೂಕು ಹಾಗೂ ಜಿಲ್ಲಾ ಹಂತಗಳಲ್ಲಿ ಯಶಸ್ವಿಯಾಗುವ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶವಿದೆ ಎಂದು ತಿಳಿಸಿದರು. ವಿಜೇತ ವಿದ್ಯಾರ್ಥಿಗಳಿಗೆ ನೇರವಾಗಿ ನಗದು ಬಹುಮಾನವನ್ನು ಅವರ ಖಾತೆಗೆ ಜಮೆಯಾಗಿ ವರ್ಗಾಯಿಸುವ ವ್ಯವಸ್ಥೆಯನ್ನು ಇಲಾಖೆ ಮಾಡಿದೆ ಎಂದರು.

ವಿದ್ಯಾರ್ಥಿಗಳು ಯಾವುದೇ ಅಡಚಣೆಯಿಲ್ಲದೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತೆ ಉಪಹಾರ ಮತ್ತು ವಾಹನ ಸೌಲಭ್ಯಗಳನ್ನು ಇಲಾಖೆಯು ಒದಗಿಸಿದೆ. ಮಕ್ಕಳ ಪ್ರತಿಭೆ ಅನಾವರಣಗೊಳ್ಳಲು ಯಾವುದೇ ಸಮಸ್ಯೆಯೂ ಅಡ್ಡಿಯಾಗಬಾರದು ಎಂಬುದು ಇಲಾಖೆಯ ಆಶಯ ಎಂದು ಅವರು ಸೂಚಿಸಿದರು.ನವೆಂಬರ್‌ 24ರಂದು ನಡೆಯಲಿರುವ ತಾಲೂಕು ಮಟ್ಟದ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಶಂಕರ್, ಸಿಆರ್‌ಪಿ ವಿಷ್ಣುವರ್ಧನ್ ಹಾಗೂ ತರಳಬಾಳು ಶಾಲೆಯ ಮುಖ್ಯ ಶಿಕ್ಷಕ ಸುನಿಲ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ