ಗರುಡ ಗ್ಯಾಂಗ್ ಪುಂಡರ ಮೇಲೆ ಗೂಂಡಾ ಕಾಯ್ದೆ ಯಾಕಿಲ್ಲ: ಶ್ರೀನಿಧಿ ಹೆಗ್ಡೆ

KannadaprabhaNewsNetwork |  
Published : May 26, 2024, 01:38 AM IST
ಹೆಗ್ಡೆ25 | Kannada Prabha

ಸಾರಾಂಶ

ಮೇ 18ರಂದು ರಾತ್ರಿ ಘಟನೆ ನಡೆದಿದ್ದರೂ, ಎರಡು ದಿನಗಳ ತಡವಾಗಿ ಮೇ 20ರಂದು ಪ್ರಕರಣ ದಾಖಲಿಸಿದ್ದಾರೆ. ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿರಲಿಲ್ಲವೇ? ಪರಿಶೀಲಿಸಿದ್ದರೆ ಘಟನೆಯ ಗಂಭೀರತೆಯನ್ನು ಅರಿತು ಪೊಲೀಸರು ಜಾಣ ಮೌನ ತೋರಿಸಿರುವುದು ಯಾಕೆ ಎಂಬ ಅನುಮಾನ ಕಾಡುತ್ತಿದೆ ಎಂದು ಶ್ರೀನಿಧಿ ಹೆಗ್ಡೆ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ನಗರದಲ್ಲಿ ಮಾರಕಾಸ್ತ್ರಗಳಿಂದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ವಾರ ಕಳೆದರೂ ಪೊಲೀಸ್‌ ಇಲಾಖೆ ಆರೋಪಿಗಳನ್ನು ಪತ್ತೆ ಹಚ್ಚಲು ವಿಫಲವಾಗಿದೆ. ಅನೇಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಗರುಡ ಗ್ಯಾಂಗಿನ ಪುಂಡರ ಮೇಲೆ ಗೂಂಡಾ ಕಾಯ್ದೆಯನ್ನು ಯಾಕೆ ಹಾಕಿಲ್ಲ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ ಹಾಗೂ ಹೈಕೋರ್ಟ್ ನ್ಯಾಯವಾದಿ ಶ್ರೀನಿಧಿ ಹೆಗ್ಡೆ ಪ್ರಶ್ನಿಸಿದ್ದಾರೆ.

ಮೇ 18ರಂದು ರಾತ್ರಿ ಘಟನೆ ನಡೆದಿದ್ದರೂ, ಎರಡು ದಿನಗಳ ತಡವಾಗಿ ಮೇ 20ರಂದು ಪ್ರಕರಣ ದಾಖಲಿಸಿದ್ದಾರೆ. ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿರಲಿಲ್ಲವೇ? ಪರಿಶೀಲಿಸಿದ್ದರೆ ಘಟನೆಯ ಗಂಭೀರತೆಯನ್ನು ಅರಿತು ಪೊಲೀಸರು ಜಾಣ ಮೌನ ತೋರಿಸಿರುವುದು ಯಾಕೆ ಎಂಬ ಅನುಮಾನ ಕಾಡುತ್ತಿದೆ ಎಂದವರು ಹೇಳಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಬಜರಂಗದಳ, ವಿಶ್ವ ಹಿಂದು ಪರಿಷತ್‌ ಕಾರ್ಯಕರ್ತರನ್ನು ಸಮಾಜದಲ್ಲಿ ಶಾಂತಿ ಭಂಗವಾಗುತ್ತದೆ ಎಂಬ ಕಾರಣ ನೀಡಿ, ಗಡಿಪಾರು ಮಾಡುತ್ತಾರೆ. ರಾಜ್ಯದಲ್ಲಿ ಇನ್ನು ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ, ಈಗಾಗಲೇ ರೌಡಿ ಶೀಟರ್‌ಗಳಾಗಿರುವ ಈ ಪುಂಡರನ್ನು ಯಾಕೆ ಗಡಿಪಾರು ಮಾಡಿಲ್ಲ ಎಂದು ಹೆಗ್ಡೆ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ಭ್ರಷ್ಟಾಚಾರ ರಹಿತ ಅಧಿಕಾರಿ ಎಂದು ಹೆಸರು ಪಡೆದಿರುವ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಅರುಣ್ ಅವರಿಗೆ ಈ ಪ್ರಕರಣವನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಸರ್ಕಾರದ ಒತ್ತಡವಿತ್ತೇ? ಗಂಭೀರ ಪ್ರಕರಣ ನಡೆದು ವಾರ ಕಳೆದರೂ, ಆರೋಪಿಗಳನ್ನು ಬಂಧಿಸುವಲ್ಲಿ ಪೋಲಿಸ್ ಇಲಾಖೆ ಸಂಪೂರ್ಣ ವಿಫಲವಾಗಿದ್ದಾರೆ ಎಂದವರು ಆರೋಪಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂಡುಬಿದಿರೆ: ಗೌರಿಕೆರೆ ಶ್ರೀ ರಾಮ ಮಂದಿರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಎಸ್ಸೆಸ್ಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 14151 ವಿದ್ಯಾರ್ಥಿಗಳು ಹಾಜರು