ಕನ್ನಡಪ್ರಭ ವಾರ್ತೆ ಪಾಂಡವಪುರ
17 ಮಂದಿ ಸದಸ್ಯರ ಬಲದ ಗ್ರಾಪಂನಲ್ಲಿ ಜೆಡಿಎಸ್ ಬೆಂಬಲಿತ-11, ರೈತ ಸಂಘ-ಕಾಂಗ್ರೆಸ್ ಬೆಂಬಲಿತ-6 ಮಂದಿ ಸದಸ್ಯರಿದ್ದರು. ಹಿಂದಿನ ಉಪಾಧ್ಯಕ್ಷೆ ಎಂ.ಎ.ಶೋಭಾ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಜೆಡಿಎಸ್ ಬೆಂಬಲಿತ ಸದಸ್ಯ ಗೌರಮ್ಮ, ರೈತಸಂಘ-ಕಾಂಗ್ರೆಸ್ ಬೆಂಬಲಿತ ಸದಸ್ಯ ಸಂಕಲ್ಪ ನಾಮಪತ್ರಸಲ್ಲಿಸಿದರು.
ನಂತರ ಚುನಾವಣಾಧಿಕಾರಿಗಳಾದ ಕಾವೇರಿ ನೀರಾವರಿ ನಿಗಮದ ಎಇಇ ಜಯರಾಮು ಅವರು ಗುಪ್ತ ಮತದಾನ ಪ್ರಕ್ರಿಯೆಯ ಮೂಲಕ ಚುನಾವಣೆ ನಡೆಸಿದರು. ಗೌರಮ್ಮ 11 ಮತ, ಸಂಕಲ್ಪಗೆ 6 ಮತಗಳು ಬಂದವು. 5 ಮತಗಳ ಅಂತರದಿಂದ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಗೌರಮ್ಮ ಗೆಲುವು ಸಾಧಿಸಿ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಗೌರಮ್ಮ ಆಯ್ಕೆಯಾಗುತ್ತಿದ್ದಂತೆಯೇ ಬೆಂಬಲಿಗರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿಹಂಚಿ ಸಂಭ್ರಮಿಸಿದರು.ಅಧ್ಯಕ್ಷ ಎಚ್.ಸಿ.ಧನಂಜಯ್ ಮಾತನಾಡಿ, ನಮ್ಮ ನಾಯಕರು, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರ ಆಶೀರ್ವಾದದ ಹಾಗೂ ಜೆಡಿಎಸ್ ಬೆಂಬಲಿತ ಸದಸ್ಯರ ಸಹಕಾರಿದಿಂದ ಹಳೇಬೀಡು ಗ್ರಾಪಂನ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗೌರಮ್ಮ ಆಯ್ಕೆಯಾಗಿದ್ದಾರೆ ಎಂದರು.
ಚುನಾವಣಾ ಪ್ರಕ್ರಿಯೆಯಲ್ಲಿ ಗ್ರಾಪಂ ಅಧ್ಯಕ್ಷ ಎಚ್.ಸಿ.ಧನಂಜಯ್, ಸದಸ್ಯರಾದ ಮಂಜಳ, ಎಚ್.ಪಿ.ಪುಟ್ಟೇಗೌಡ, ಚಿಕ್ಕತಾಯಮ್ಮ, ಸಿ.ಜೆ.ರಾಧಾ, ಸೌಭಾಗ್ಯಮ್ಮ, ಎಚ್.ಪಿ.ಪದ್ಮರಾಜ್, ಎಂ.ಎ.ಶೋಭಾ, ಮಂಗಳಮ್ಮ ,ಜಯಲಕ್ಷ್ಮಮ್ಮ, ಸಿ.ಕೆ.ಕರೀಗೌಡ, ಶಂಕರಶೆಟ್ಟಿ, ಶಶಿಕಲಾ,ಕುಮಾರ್, ಎನ್.ಸಿ.ಬೋರೇಗೌಡ ಭಾಗವಹಿಸಿದ್ದರು.