ಕನ್ನಡಪ್ರಭ ವಾರ್ತೆ ಗೌರಿಬಿದನೂರು
ಹಾಲು ಶಿತಲೀಕರಣ ಘಟಕದಲ್ಲಿ ಹಮ್ಮಿಕೊಂಡಿದ್ದ ಕ್ಷೀರೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಾಲು ಒಕ್ಕೂಟದಿಂದ ದೊರೆಯುವ ಸೌಲಭ್ಯಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು. ಬಹುತೇಕ ರೈತಾಪಿ ವರ್ಗದವರು ಹೈನುಗಾರಿಕೆ ಮೇಲೆ ಅವಲಂಬಿತರಾಗಿದ್ದು, ಅವರೆಲ್ಲರ ನೆಮ್ಮದಿಯ ಬದುಕಿಗೆ ಹೈನುಗಾರಿಕೆ ಸಹಕಾರಿಯಾಗಿದೆ ಎಂದರು.
ಹಾಲು ಉತ್ಪಾದಕರಿಗೆ ನೆರವುಹಾಲು ಒಕ್ಕೂಟವು ಹಾಲಿಗೆ ಉತ್ತಮ ಪ್ರೋತ್ಸಾಹ ಧನ ನೀಡುವ ಜೊತೆಗೆ ರೈತರಿಗೆ ಉತ್ತಮ ಬೆಲೆ ನೀಡಿದೆ. ಇದರಿಂದಾಗಿ ಗ್ರಾಮೀಣ ಭಾಗದ ರೈತಾಪಿ ವರ್ಗದ ಜನತೆ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ಕ್ಷೇತ್ರದಲ್ಲಿನ ರೈತರ ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಚರ್ಚಿಸಿ ಇಡೀ ರಾಜ್ಯದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದೇನೆ. ರೈತರ ಯಾವುದೇ ಸಮಸ್ಯೆಗಳಿಗೆ ನನ್ನ ಸಹಾಯ, ಸಹಕಾರವಿರುತ್ತದೆ ಎಂದು ತಿಳಿಸಿದರು.
ಹಸಿರು ಮೇವು ಉತ್ಪಾದನೆ
ಒಕ್ಕೂಟದ ವತಿಯಿಂದ ಹಸಿರು ಮೇವು ಉತ್ಪಾದನೆ ಮಾಡಲು ಹೈನುದಾರರಿಗೆ ಪ್ರೋತ್ಸಾಹ ನೀಡಲಾಗಿದೆ. ಒಕ್ಕೂಟವು ಹಾಲಿನ ಪ್ರಮಾಣದಲ್ಲಿ ಪ್ರಗತಿ ಕಾಣಲು ಹಾಲು ಉತ್ಪಾದಕರು, ಸಹಕಾರ ಸಂಘದ ಸಿಬ್ಬಂದಿ ಹಾಗೂ ನಿಮ್ಮೆಲ್ಲರ ಸಹಕಾರದಿಂದ ಮುಂದಿನ ದಿನಗಳಲ್ಲಿ ಒಕ್ಕೂಟವು ಅಭಿವೃದ್ಧಿಯ ಪಥದತ್ತ ಸಾಗಾಲಿ ಎಂಬುದು ನಮ್ಮೆಲ್ಲರ ಆಶಯವಾಗಿದೆ ಎಂದು ತಿಳಿಸಿದರು.ವೇದಿಕೆಯಲ್ಲಿ ಹಾಲು ಉತ್ಪಾದಕರ ಹಾಗೂ ಸಿಬ್ಬಂದಿಯ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಲಾಯಿತು. ಒಕ್ಕೂಟದ ಮಾಜಿ ಅಧ್ಯಕ್ಷ ಜೆ.ಕಾಂತರಾಜು, ನಿರ್ದೇಶಕಿ ಸುನಂದಮ್ಮ, ವ್ಯವಸ್ಥಾಪಕ ನಾಗೇಶ್, ಉಪ ವ್ಯವಸ್ಥಾಪಕ ನರೇಂದ್ರ, ಮೇವು ಘಟಕದ ವ್ಯವಸ್ಥಾಪಕ ಮಂಜುನಾಥ್, ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಸ್.ಮಾರುತಿ, ನೌಕರರ ಸಂಘದ ಅಧ್ಯಕ್ಷ ವೆಂಕಟೇಶ್ ರೆಡ್ಡಿ, ಇನ್ನಿತರರು ಭಾಗವಹಿಸಿದ್ದರು.