ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದಲ್ಲಿ ಜು.8ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಿ.ಜಿ.ಗೌರಿಶಂಕರ ಅವರನ್ನು ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಚಂದ್ರಶೇಖರಪ್ಪ ಅವಿರೋಧ ಆಯ್ಕೆ ಘೋಷಣೆ ಮಾಡಿದರು.
ಸಂಘದ ನಿರ್ದೇಶಕರಾಗಿ ಮದ್ದೂರಿನ ಪಿ.ರಾಜಶೇಖರ್, ಎಂ.ವೀರಭದ್ರಸ್ವಾಮಿ, ಎಚ್.ಬಿ.ಸ್ವಾಮಿ, ಕೆ.ಶಿವಕುಮಾರ್, ಬೂದಗುಪ್ಪೆ ಗ್ರಾಮದ ಬಿ.ಎಸ್.ಬಸವಲಿಂಗಶಾಸ್ತ್ರಿ, ಎಸ್.ಮರಿಲಿಂಗಪ್ಪ, ಬೆಸಗರಹಳ್ಳಿ ಬಿ.ಎಸ್.ನಾಗರಾಜು, ದೊಡ್ಡ ಅರಸಿನಕೆರೆ ಡಿ.ಎಂ.ರವಿಕುಮಾರ್, ಅಣ್ಣೂರು ಆರ್.ಸಿದ್ದಪ್ಪ, ಭಾರತೀನಗರ ಕೆ.ಎಸ್.ಸಿದ್ದೇಶ್ವರ್, ಕಾಡುಕೊತ್ತನಹಳ್ಳಿ ದಯಾನಂದ್, ಎಸ್.ಐ.ಹೊನ್ನಲಗೆರೆ ಎಚ್.ಆರ್.ರೇವಣ್ಣಸ್ವಾಮಿ, ಬಿದರಕೋಟೆ ಯೋಗೇಶ್, ಮಹಿಳಾ ನಿರ್ದೇಶಕರಾಗಿ ಶಿವಪುರ ಶಿಲ್ಪಶ್ರೀ, ಭಾರತೀನಗರ ಜೆ.ಕವಿತಾ, ಮಡೇನಹಳ್ಳಿ ಎಂ.ಎಸ್.ನೇತ್ರಾವತಿ, ಕೆ.ಹೊನ್ನಲಗೆರೆ ಎಂ.ಎಸ್.ಮಂಜುಳಾ, ಭೀಮನಕೆರೆ ಶಶಿಕಲಾ, ಎಸ್.ಐ.ಹೊನ್ನಲಗೆರೆ ನಿಲಾಂಬಿಕ ಹಾಗೂ ತಗ್ಗಹಳ್ಳಿ ಗ್ರಾಮದ ಶಿವಕುಮಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಿ.ಜಿ.ಗೌರಿಶಂಕರ್ ಮಾತನಾಡಿ, ಚುನಾವಣೆಯಲ್ಲಿ ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ ತಾಲೂಕಿನ ಎಲ್ಲಾ ವೀರಶೈವ ಲಿಂಗಾಯತ ಮುಖಂಡರಿಗೆ ಹಾಗೂ ಸಂಘದ ಎಲ್ಲಾ ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಹಾಗೂ ನಾನು ಮತ್ತು ನನ್ನ ತಂಡ ಸಮಾಜದ ಒಳಿತಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.ವಿಜೃಂಭಣೆಯಿಂದ ಜರುಗಿದ ದೇಗುಲದ ವಾರ್ಷಿಕೋತ್ಸವ