ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸಲು ಸರ್ಕಾರದ ಕ್ರಮ

KannadaprabhaNewsNetwork |  
Published : Apr 18, 2026, 01:45 AM IST
ಕ್ಯಾಪ್ಷನ16ಕೆಡಿವಿಜಿ32 ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು. | Kannada Prabha

ಸಾರಾಂಶ

ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನ ಹಿಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ವತಿಯಿಂದ ಅಥವಾ ಮಾನ್ಯತೆ ಪಡೆದ ಉಪ ಏಜೆನ್ಸಿಗಳಿಂದ ಜಿಲ್ಲೆಯ ರೈತರ ಭತ್ತ ಖರೀದಿಸಲು ಉದ್ದೇಶಿಸಿದೆ. ಅರ್ಹ ರೈತರು ಜಗಳೂರು ಹೊರತುಪಡಿಸಿ, ಜಿಲ್ಲೆಯ ಉಳಿದ 04 ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತ ಖಟಾವಿನವರೆಗೂ ಕಾಯದೇ ನಿಗದಿಪಡಿಸಿದ ಕಾಲಮಿತಿಯೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.

- ಜಿಲ್ಲೆಯ ರೈತರು ತ್ವರಿತವಾಗಿ ಹೆಸರು ನೋಂದಾಯಿಸಿಕೊಳ್ಳಬೇಕು: ಡಿ.ಸಿ. ಸೂಚನೆ । ಟಾಸ್ಕ್ ಫೋರ್ಸ್ ಸಮಿತಿ ಸಭೆ - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನ ಹಿಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ವತಿಯಿಂದ ಅಥವಾ ಮಾನ್ಯತೆ ಪಡೆದ ಉಪ ಏಜೆನ್ಸಿಗಳಿಂದ ಜಿಲ್ಲೆಯ ರೈತರ ಭತ್ತ ಖರೀದಿಸಲು ಉದ್ದೇಶಿಸಿದೆ. ಅರ್ಹ ರೈತರು ಜಗಳೂರು ಹೊರತುಪಡಿಸಿ, ಜಿಲ್ಲೆಯ ಉಳಿದ 04 ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತ ಖಟಾವಿನವರೆಗೂ ಕಾಯದೇ ನಿಗದಿಪಡಿಸಿದ ಕಾಲಮಿತಿಯೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಹಿಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಗೆ ಸಂಬಂಧಿಸಿದಂತೆ ಏರ್ಪಡಿಸಲಾಗಿದ್ದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಕೃಷಿ ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ಕೂಡಲೇ ಖರೀದಿ ಕೇಂದ್ರಗಳಲ್ಲಿ ಭತ್ತ ಖರೀದಿಗೆ ಅಗತ್ಯವಾಗಿರುವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅವರು ಸಲಹೆ ನೀಡಿದರು.

ರೈತರು ತಾವು ಪ್ರತಿ ಎಕರೆಗೆ ಬೆಳೆದ 25 ರಿಂದ 50 ಕ್ವಿಂಟಲ್ ಭತ್ತವನ್ನು ಖರೀದಿ ಕೇಂದ್ರದಲ್ಲಿ ನೇರವಾಗಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ಭತ್ತವನ್ನು ಸರಬರಾಜು ಮಾಡಿದ ರೈತರಿಗೆ ಅವರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮುಖಾಂತರ ಮಾಡಲು ಕ್ರಮ ವಹಿಸಲಾಗಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಲ್‌ಗೆ ₹2369.00 ಗಳನ್ನು ಹಾಗೂ ''''''''ಎ'''''''' ಗ್ರೇಡ್ ಭತ್ತ ಪ್ರತಿ ಕ್ವಿಂಟಲ್‌ಗೆ 2389.00 ನಿಗದಿಪಡಿಸಲಾಗಿದೆ. ಮೇ ಮಾಸಾಂತ್ಯದವರೆಗೆ ಭತ್ತ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದರು.

ಅಧಿಕಾರಿಗಳು ಖರೀದಿಗೆ ಸಂಬಂಧಿಸಿದ ಅಗತ್ಯ ಪ್ರಕ್ರಿಯೆಗಳನ್ನು ಕೂಡಲೇ ಪ್ರಾರಂಭಿಸಬೇಕು. ಅವಶ್ಯಕವಾಗಿರುವ ತಂತ್ರಾಂಶವನ್ನು ಎನ್.ಐ.ಸಿ.ಯ ಸಹಯೋಗದೊಂದಿಗೆ ಆಹಾರ ಇಲಾಖೆ ಅಧಿಕಾರಿಗಳು ಸಿದ್ಧಪಡಿಸಿಕೊಂಡು, ಖರೀದಿಯ ಮುನ್ನ ಮತ್ತು ನಂತರದ ಎಲ್ಲ ದತ್ತಾಂಶಗಳನ್ನು ಕಾಲಕಾಲಕ್ಕೆ ದಾಖಲಿಸುವಂತೆ ಅವರು ಸೂಚಿಸಿದರು.

ಸಿಲಿಂಡರ್‌ ಕೃತಕ ಅಭಾವ ವಿರುದ್ಧ ಕ್ರಮ:

ಜಿಲ್ಲೆಯಲ್ಲಿ ಗ್ರಾಹಕ ಬಳಕೆಯ ಅಡುಗೆ ಅನಿಲದ ಸಿಲಿಂಡರ್‌ಗಳ ಸರಬರಾಜು ಸಮರ್ಪಕವಾಗಿದೆ. ಅತ್ಯಲ್ವ ಅವಧಿಯಲ್ಲಿ ಗ್ರಾಹಕರಿಗೆ ತಲುಪಿಸಲಾಗುತ್ತಿದೆ. ಕೃತಕ ಅಭಾವ ಸೃಷ್ಠಿಸಿ, ಗ್ರಾಹಕರಿಗೆ ತಪ್ಪು ಮಾಹಿತಿ ನೀಡಿ, ಜನರನ್ನು ಗೊಂದಲಕ್ಕೀಡು ಮಾಡುವ ವ್ಯಕ್ತಿ ಅಥವಾ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಗ್ರಾಹಕ ಬಳಕೆ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿರುವುದು ಕಂಡುಬಂದಲ್ಲಿ ಅಂತಹವರ ವಿರುದ್ಧವೂ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಗೃಹ ಬಳಕೆಯ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದ್ದ ವ್ಯಕ್ತಿಗಳನ್ನು ಗುರುತಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ, ಅವರಿಂದ ಸುಮಾರು 110 ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಕೆ.ಪಿ. ಮಧುಸೂದನ್ , ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಜಂಟಿ ನಿರ್ದೇಶಕಿ ಎಚ್.ಸಿ.ಎಂ. ರಾಣಿ, ಕೃಷಿ ಇಲಾಖೆಯ ಉಪನಿರ್ದೇಶಕ ಜಿಯಾವುಲ್ಲಾ, ರಾಜ್ಯ ಆಹಾರ ನಿಗಮದ ಜಿಲ್ಲಾ ವ್ಯವಸ್ಥಾಪಕ ನಾಗರಾಜ್, ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಫರ್ವೇಜ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

- - -

-16ಕೆಡಿವಿಜಿ32: ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿ ಯುನಿಟ್‌ ವಿದ್ಯುತ್‌ಗೆ 56 ಪೈಸೆ ಹೆಚ್ಚಿಸಿದ ಬೆಸ್ಕಾಂ
ರಾಜ್ಯಕ್ಕೆ ಕಾಲಿಟ್ಟ ಹಕ್ಕಿಜ್ವರ, 7444 ಕೋಳಿ ನಾಶ