)
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳ ಮೃಗಾಲಯವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲಾಗುವುದು ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಹೇಳಿದೆ.
ಈ ವೇಳೆ ಸರ್ಕಾರದ ಪರ ರಾಜ್ಯ ಅಡ್ವೋರೆಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಹಾಜರಾಗಿ, ಪಿಲಿಕುಳ ಮೃಗಾಲಯವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲಾಗುವುದು. ನಿರ್ವಹಣೆ ಮತ್ತಿತರ ವಿಚಾರಗಳಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಜ್ಯ ಮೃಗಾಲಯ ಪ್ರಾಧಿಕಾರದ ನಡುವೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು. ಮೃಗಾಲಯದಲ್ಲಿರುವ 652 ಪ್ರಾಣಿಗಳ ಸುರಕ್ಷತೆ ಮತ್ತು ಕಾಳಜಿ ಸರ್ಕಾರದ ಆದ್ಯತೆಯಾಗಿದೆ ಎಂದು ಭರವಸೆ ನೀಡಿದರು.ಅದಕ್ಕೆ ಪ್ರತಿಕ್ರಿಯಿಸಿದ ಪೀಠ, ಮೃಗಾಯಲಯ ವರ್ಗಾವಣೆ ಹೇಗಿರಲಿದೆ? ಕೇವಲ ಮೃಗಾಲಯ ಇರುವ ಸೀಮಿತ ಭೌಗೋಳಿಕ ಪ್ರದೇಶ ಮತ್ತು ಪ್ರಾಣಿಗಳಿಗೆ ಮಾತ್ರ ಸೀಮಿತವಾಗಿರಲಿದೆಯೇ? ಒಟ್ಟಾರೆ ಜೈವಿಕ ಉದ್ಯಾನವನದ ವಿಚಾರ ಏನಾಗಲಿದೆ ಎಂಬ ವಿವರಣೆಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಸೆ.1ಕ್ಕೆ ಮುಂದೂಡಿತು.