ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ತಾಪಂ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಎಸ್ಸಿಪಿ ಮತ್ತು ಎಸ್ಟಿಪಿ ಅನುದಾನಗಳನ್ನು ಬಳಕೆ ಕುರಿತು ಅರಿವು ಮೂಡಿಸುವ ಸಂಬಂಧ ದಸಂಸ ಮುಖಂಡ ಗಿರಿಯಾರಹಳ್ಳಿಮೂರ್ತಿ ನೇತೃತ್ವದಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
ಬಾಬ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ದುರ್ಬಲ ವರ್ಗದವರ ಅಭಿವೃದ್ಧಿಗಾಗಿ ನೀಡಿದ ಸಂವಿಧಾನವನ್ನು ಅರ್ಪಣೆ ಮಾಡಿದ ಬಳಿಕ ನಾವೆಲ್ಲರು ಸಮಾನರು ಎನ್ನುವ ಸಂದೇಶ ನೀಡಿದರು. ಆದರೆ, ದಲಿತರು ಇನ್ನೂ ಆರ್ಥಿಕ ಹಾಗೂ ಸಾರ್ವತ್ರಿಕವಾಗಿ ಸಾಧನೆ ಮಾಡಬೇಕು ಎಂದು ಹೇಳಿದ್ದರೂ ಇಂದಿಗೂ ದಲಿತರು ಆರ್ಥಿಕವಾಗಿ ಸಬಲೀಕರಣಗೊಳ್ಳಬೇಕಾಗಿದೆ ಎಂದರು.ಪಂಚ ವಾರ್ಷಿಕ ಯೋಜನೆಗಳ ಮೂಲಕ ದಲಿತರನ್ನು ಆರ್ಥಿಕವಾಗಿ ಅಭಿವೃದ್ಧಿ ಪಡಿಸಬೇಕು ಎನ್ನುವ ಪ್ರಯತ್ನ ನಡೆಯಿತು. ಆದರೆ, ಅಲ್ಲಿ ಕೃಷಿ, ನೀರಾವರಿ, ನಗರೀಕರಣಕ್ಕೆ ಆಧ್ಯತೆ ನೀಡಿದ ಹಿನ್ನೆಲೆಯಲ್ಲಿ ದಲಿತರ ಅಭಿವೃದ್ಧಿ ಸಾಧ್ಯವಾಗಲಿಲ್ಲ. ಆ ನಂತರ ಯೋಜನಾ ಆಯೋಗವು 2005ರಲ್ಲಿ ಎಸ್ ಸಿಪಿ ಹಾಗೂ ಎಸ್ ಟಿಪಿ ಯೋಜನೆಯನ್ನು ಜಾರಿಗೆ ತಂದು ದಲಿತರು, ದಲಿತ ಕೇರಿಗಳು, ಸಮುದಾಯವನ್ನು ಅಭಿವೃದ್ಧಿ ಪಡಿಸುವ ಕೆಲಸ ಮಾಡಲಾಯಿತು ಎಂದರು.
ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಗಾಂಧಿಜೀ ಕಂಡ ಗ್ರಾಮ ಸ್ವರಾಜ್ಯದ ಕನಸ್ಸು ಈಡೇರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸರ್ಕಾರಗಳಿಂದ ದೊರೆಯುವ ಯೋಜನೆಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲೀಕರಣಗೊಳ್ಳಬೇಕು ಎಂದರು.