೫ ಸಾವಿರ ಮನೆಗಳ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ: ಶಾಸಕ ಪಿ.ರವಿಕುಮಾರ್

KannadaprabhaNewsNetwork |  
Published : Jun 04, 2025, 01:10 AM IST
ಪಿ.ರವಿಕುಮಾರ್‌ | Kannada Prabha

ಸಾರಾಂಶ

ಮಂಡ್ಯ ನಗರದ ಹೊರವಲಯದಲ್ಲಿ ೧೫ ಎಕರೆ ಸರ್ಕಾರಿ ಜಾಗವನ್ನು ಗುರುತಿಸಿ ಅತ್ಯಾಧುನಿಕ ಹೈಟೆಕ್ ಜಿ ಪ್ಲಸ್ ಮಾದರಿಯ ಬಹುಮಹಡಿ ಕಟ್ಟಡ ನಿರ್ಮಾಣ ಮಾಡಲು ಅನುಮೋದನೆ ಪಡೆಯಲಾಗಿದೆ. ಶೀಘ್ರವೇ ಈ ಯೋಜನೆಗೆ ಚಾಲನೆ ನೀಡಲಾಗುವುದು.

ಕನ್ನಡಪ್ರಭ ವಾರ್ತೆ ಮಂಡ್ಯ

ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೫ ಸಾವಿರ ಮನೆಗಳನ್ನು ನಿರ್ಮಾಣ ಮಾಡಲು ಸರ್ಕಾರದ ಅನುಮೋದನೆ ಪಡೆಯಲಾಗಿದೆ ಎಂದು ಶಾಸಕ ಪಿ.ರವಿಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ರಾಜೀವ್‌ಗಾಂಧಿ ಹೌಸಿಂಗ್ ಕಾರ್ಪೋರೇಷನ್ ಸಭಾಂಗಣದಲ್ಲಿ ವಸತಿ ಸಚಿವ ಜಮೀರ್ ಅಹ್ಮದ್‌ಖಾನ್ ಹಾಗೂ ವಸತಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಗರದ ಬೀಡಿ ಕಾಲೋನಿಯಲ್ಲಿ ನಿರ್ಮಾಣವಾಗಿರುವ ವಸತಿಗಳನ್ನು ವಸತಿ ರಹಿತರಿಗೆ ವಿತರಣೆ ಮಾಡುವ ಸದುದ್ದೇಶದಿಂದ ನ್ಯಾಯಾಲಯದಲ್ಲಿ ಅಫಿಡೇವಿಟ್ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಿ ಅನುಮತಿ ಪಡೆಯಲಾಯಿತು ಎಂದಿದ್ದಾರೆ.

ಹಾಲಹಳ್ಳಿ ಸ್ಲಂನಲ್ಲಿ ನೂತನವಾಗಿ ೮೦ ಮನೆ ನಿರ್ಮಾಣ ಮಾಡಲು ೨.೫ ಕೋಟಿ ಹಣವನ್ನು ಬಿಡುಗಡೆ ಮಾಡಿಸುವ ಮೂಲಕ ಇನ್ನುಳಿದ ಎರಡೂವರೆ ಎಕರೆ ಜಾಗದಲ್ಲಿ ನೂತನವಾಗಿ ೫೦೦ ಮನೆಗಳನ್ನು ನಿರ್ಮಾಣ ಮಾಡಲು ಅನುಮೋದನೆ ಪಡೆಯಲಾಗಿದೆ ಎಂದರು.

ಕಳೆದ ೭೫ ವರ್ಷಗಳಿಂದ ಹಕ್ಕು ಪತ್ರ ವಂಚಿತರಾಗಿರುವ ಆರ್‌ಟಿಓ ಸ್ಲಂ ಹಾಗೂ ಹಾಲಹಳ್ಳಿ ಮುಸ್ಲಿಂ ಬ್ಲಾಕ್ ನಿವಾಸಿಗಳಿಗೆ ಕೂಡಲೇ ಹಕ್ಕುಪತ್ರ ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ಜಮೀರ್ ಅಹಮದ್ ಸೂಚನೆ ನೀಡಿದರು ಎಂದರು.

ನಗರದ ಹೊರವಲಯದಲ್ಲಿ ೧೫ ಎಕರೆ ಸರ್ಕಾರಿ ಜಾಗವನ್ನು ಗುರುತಿಸಿ ಅತ್ಯಾಧುನಿಕ ಹೈಟೆಕ್ ಜಿ ಪ್ಲಸ್ ಮಾದರಿಯ ಬಹುಮಹಡಿ ಕಟ್ಟಡ ನಿರ್ಮಾಣ ಮಾಡಲು ಅನುಮೋದನೆ ಪಡೆಯಲಾಗಿದೆ. ಶೀಘ್ರವೇ ಈ ಯೋಜನೆಗೆ ಚಾಲನೆ ನೀಡಲಾಗುವುದು. ನಗರದಲ್ಲಿರುವ ಎಲ್ಲಾ ಸ್ಲಂಗಳಿಗೂ ಮೂಲಭೂತ ಸೌಕರ್ಯ ಒದಗಿಸಲು ವಿಶೇಷ ಅನುದಾನವನ್ನು ಪಡೆದುಕೊಳ್ಳುವ ಮೂಲಕ ಅಲ್ಪಸಂಖ್ಯಾತರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ಕೆ.ಗೌಡಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಅಮಾನತು

ಕನ್ನಡಪ್ರಭ ವಾರ್ತೆ ಮಂಡ್ಯ

ತಾಲೂಕಿನ ಕೆ.ಗೌಡಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ೧೮.೮೯ ಲಕ್ಷ ರು. ಹಣ ದುರುಪಯೋಗ ಆರೋಪದ ಮೇರೆಗೆ ಸಂಘದ ಸಿಇಒ ಕೆ.ರವಿ ಅವರನ್ನು ಆಡಳಿತಾಧಿಕಾರಿ ಸಿ.ಎ.ಸುಧಾಕರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಹೊಳಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಓ ಕೆ.ಹೆಚ್.ಹರ್ಷವರ್ಧನ್ ಅವರಿಗೆ ಸಂಘದ ಹುದ್ದೆಯ ಪ್ರಭಾರ ವಹಗಿಸಿಕೊಡುವಂತೆ ಸೂಚಿಸಲಾಗಿದೆ. ೨೦೨೧-೨೨, ೨೦೨೨-೨೩ನೇ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿ ನಮೂದಿಸಿರುವ ದುರುಪಯೋಗದ ೧೮.೮೯ ಲಕ್ಷ ರು.ಗಳನ್ನು ಪಾವತಿಸಲು ವಿಫಲರಾಗಿದ್ದು, ನಿಯಮಾನುಸಾರ ಕರ್ತವ್ಯ ನಿರ್ವಹಿಸದ ಹಿನ್ನೆಲೆಯಲ್ಲಿ ಆಂತರಿಕ ವಿಚಾರಣೆಗೊಳಪಡಿಸಿ ಅಮಾನತುಗೊಳಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ