ಧಾರವಾಡ ನೀರು ಬಿಡಲು ಸರ್ಕಾರದ ಮಾನದಂಡ ಅಗತ್ಯ: ಸಚಿವ ಸತೀಶ

KannadaprabhaNewsNetwork |  
Published : Jul 09, 2025, 12:19 AM IST
ಸಚಿವ ಸತೀಶ ಜಾರಕಿಹೊಳಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು | Kannada Prabha

ಸಾರಾಂಶ

ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಬಿಡುಗಡೆಗೊಳಿಸಲು ಸರ್ಕಾರದ ಮಾನದಂಡ ಅನುಸರಿಸಿ, ನಿಯಮ ಪಾಲಿಸಬೇಕಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಬಿಡುಗಡೆಗೊಳಿಸಲು ಸರ್ಕಾರದ ಮಾನದಂಡ ಅನುಸರಿಸಿ, ನಿಯಮ ಪಾಲಿಸಬೇಕಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಒಯ್ಯುವ ಕಾಮಗಾರಿ ಪ್ರಗತಿ ಹಂತದಲ್ಲಿದ್ದು, ಇಲ್ಲಿಂದ 1 ಟಿಎಂಸಿ ನೀರು ಬಿಡುಗಡೆಗೊಳಿಸುವ ಕುರಿತು ಅಧಿಕಾರಿಗಳು ಈಗಾಗಲೇ ಪತ್ರ ಬರೆದಿದ್ದಾರೆ. ಆದೇಶ ಕೂಡ ಹೊರಡಿಸಿದ್ದಾರೆ ಅದರಂತೆ ನಿಯಮ ಪಾಲಿಸಬೇಕು ಎಂದರು.ಹಿಡಕಲ್‌ ಡ್ಯಾಮ್‌ ನಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಹರಿಸಲು ಆಗುವುದಿಲ್ಲ ಎಂದು ಕಾಮಗಾರಿ ಆರಂಭಕ್ಕೂ ಮುನ್ನ ತಿಳಿಸಿದ್ದೇವು. ಆದರೆ, ಅಧಿಕಾರಿಗಳೊಂದಿಗೆ ಮಾಹಿತಿ ಪಡೆದು ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಸರ್ಕಾರವು ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ ಮಾಡಲು ಆದೇಶಿಸಿದೆ. ಧಾರವಾಡ ಕೈಗಾರಿಕಾ ಪ್ರದೇಶಕ್ಕೆ 0.58 ಟಿಎಂಸಿ ನೀರನ್ನು ಪೂರೈಸಲು ನಿರ್ಧಾರ ಮಾಡಿ ಬಳಿಕ ಕೆಐಎಡಿಬಿ ಟೆಂಡರ್‌ ಆಗಿದೆ ಎಂದು ಕಾಮಗಾರಿಗಳನ್ನು ಆರಂಭಿಸಲಾಗಿದೆ. ಆದರೆ, ಮುಂದೆ ನೀರು ಬಿಡುಗಡೆ ಮಾಡುವಾಗ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.2018ರಲ್ಲಿ ಸಿಎಂ ಸಿದ್ದರಾಮಯ್ಯನವರ ಅವಧಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಚಾಲನೆ ನೀಡಿದ ರಾಯಬಾಗ ತಾಲೂಕಿನ 39 ಕೆರೆ ತುಂಬಿಸುವ ಯೋಜನೆ ಕಾಮಗಾರಿ ಶೇ.99 ಮುಗಿದಿದ್ದು, ಈ ಯೋಜನೆಯಿಂದ ರಾಯಬಾಗ ತಾಲೂಕಿನ ಮಳೆಯಾಶ್ರಿತ ಪ್ರದೇಶಗಳಿಗೆ ಅನುಕೂಲವಾಗಲಿದೆ. ಈ ಹಿಂದೆ ಸಿದ್ದರಾಮಯ್ಯನವರ ಅವಧಿಯಲ್ಲಿ ಚಾಲನೆ ನೀಡಿದ ಪ್ರಮುಖ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು, ಶೀಘ್ರವೇ ಸಿಎಂ ಲೋಕಾರ್ಪಣೆಗೊಳಿಸಲಿದ್ದಾರೆ. ಅಲ್ಲದೇ ಸಿಎಂ ಅವರು ಹುದಲಿ ಮೇಲ್ಸೇತುವೆ, ಡಿಸಿ ಕಚೇರಿ ಸೇರಿದಂತೆ ಜಿಲ್ಲೆಯಲ್ಲಿನ ಅಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಜಿಲ್ಲೆಯ ಎಲ್ಲ ಜಲಾಶಯಗಳು ಭರ್ತಿಯಾಗಿದ್ದು, ಹಿಡಕಲ್‌ ಜಲಾಶಯದಿಂದ ನಾಳೆಯಿಂದ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ. ಇನ್ನು ಕೃಷ್ಣಾ ನದಿಗೆ ಪ್ರಸ್ತುತ 80 ಸಾವಿರ ಕ್ಯುಸೆಕ್‌ ನೀರು ಹರಿದು ಬರುತ್ತಿದೆ.

-ಸತೀಶ ಜಾರಕಿಹೊಳಿ,
ಸಚಿವರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ