ಸರ್ಕಾರಕ್ಕೆ ವಾಲ್ಮೀಕಿ ಜಯಂತಿ ಆಚರಿಸುವ ನೈತಿಕತೆ ಇಲ್ಲ: ಡಾ.ಇಂದ್ರೇಶ್‌

KannadaprabhaNewsNetwork |  
Published : Oct 18, 2024, 12:01 AM IST
17ಕೆಎಂಎನ್‌ಡಿ-=3ಮಂಡ್ಯದ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಆಡಳಿತದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರ ಒಂದೂವರೆ ವರ್ಷಗಳಲ್ಲಿ ಬಹಳಷ್ಟು ಭ್ರಷ್ಟಾಚಾರದಲ್ಲಿ ಪಾಲ್ಗೊಂಡು, ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಹಿಂದಿನ ಸರ್ಕಾರದ ಆಡಳಿತಾವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದ ತನಿಖೆ ಮಾಡಿಸುತ್ತೇವೆ ಎಂದು ನಾಟಕವಾಡುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ವಾಲ್ಮೀಕಿ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ವಾಲ್ಮೀಕಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ವಾಲ್ಮೀಕಿ ಜಯಂತಿ ಆಚರಿಸುವ ನೈತಿಕತೆಯೇ ಇಲ್ಲ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಟೀಕಿಸಿದರು.

ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣವನ್ನು ಐಷಾರಾಮಿ ಕಾರುಗಳ ಖರೀದಿಗೆ, ತೆಲಂಗಾಣದ ಚುನಾವಣೆಗೆ ಬಳಕೆ ಮಾಡಿಕೊಂಡಿದ್ದಾರೆ. ಇದೀಗ ವಾಲ್ಮೀಕಿ ಜಯಂತಿಯನ್ನು ಯಾವ ಪುರುಷಾರ್ಥಕ್ಕಾಗಿ ಆಚರಿಸುತ್ತಿದ್ದಾರೆ ಎಂದು ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.

ಮೈಸೂರಿನ ಮುಡಾದಲ್ಲಿ 14 ನಿವೇಶನಗಳನ್ನು ಪಡೆಯುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ರಮ ಎಸಗಿದ್ದು, ವಿರೋಧ ಪಕ್ಷಗಳ ವಿರೋಧದ ನಂತರ ವಾಪಸ್ಸು ಕೊಟ್ಟು ಶುದ್ಧ ಹಸ್ತರು, 40 ವರ್ಷದ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆಯೂ ಇಲ್ಲ ಎಂದು ತೋರ್ಪಡಿಸಿಕೊಳ್ಳಲು ಹೊರಟಿದ್ದಾರೆ ಎಂದು ವ್ಯಂಗ್ಯವಾಡಿದರು.

ರಾಜಕೀಯದಲ್ಲಿ ನನ್ನಂತಹ ನಾಯಕನಿಲ್ಲ. ದೇವರಾಜ ಅರಸು ಅವರಂತೆ ನಾನು ಎಂದು ಸ್ವಯಂ ಅಹಿಂದ ನಾಯಕರಾಗಿ ಘೋಷಿಸಿಕೊಳ್ಳುತ್ತಿದ್ದಾರೆ. ನಿಜವಾಗಿಯೂ ಅವರಿಗೆ ನೈತಿಕತೆ ಇದ್ದರೆ ದಲಿತರು ಮತ್ತು ವಾಲ್ಮೀಕಿ ಸಮುದಾಯದ ಉದ್ದಾರಕ್ಕೆ ಯೋಜನೆ ರೂಪಿಸಬೇಕಿತ್ತು. ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರವೇ ನಮ್ಮ ಕಣ್ಣ ಮುಂದೆ ಇರುವಾಗ ಆ ಸಮುದಾಯಗಳಿಗೆ ಯಾವ ರೀತಿ ನ್ಯಾಯ ಒದಗಿಸುತ್ತಾರೆ ಎಂದು ದೂರಿದರು.

ಆಡಳಿತದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರ ಒಂದೂವರೆ ವರ್ಷಗಳಲ್ಲಿ ಬಹಳಷ್ಟು ಭ್ರಷ್ಟಾಚಾರದಲ್ಲಿ ಪಾಲ್ಗೊಂಡು, ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಹಿಂದಿನ ಸರ್ಕಾರದ ಆಡಳಿತಾವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದ ತನಿಖೆ ಮಾಡಿಸುತ್ತೇವೆ ಎಂದು ನಾಟಕವಾಡುತ್ತಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವುದೇ ಅವ್ಯವಹಾರವೂ ನಡೆದಿಲ್ಲ. ಪೇಸಿಎಂ, 40 ಪರ್ಸೆಂಟ್ ಕಮೀಷನ್ ಎಂದು ಆರೋಪ ಮಾಡುತ್ತಲೇ ಅಧಿಕಾರಕ್ಕೆ ಬಂದ ಈ ಸರ್ಕಾರ ಅದನ್ನು ಸಾಭೀತುಪಡಿಸುವಲ್ಲಿ ವಿಫಲವಾಗಿದೆ. ಇನ್ನು ಈ ಸರ್ಕಾರವೇ ಶೇ. 60ರಷ್ಟು ಕಮೀಷನ್ ಪಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಉದ್ಯೋಗ ಮೇಳ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಉದ್ಯೋಗದ ಅವಶ್ಯಕತೆ ಇದೆ. ಹಾಗಾಗಿ ನಿರುದ್ಯೋಗಿಗಳಿಗೆ ಅನುಕೂಲವಾಗುತ್ತದೆ. ಯಾರಿಗೆ ಉದ್ಯೋಗದ ಅವಶ್ಯಕತೆ ಇದೆ ಅವರು ಈ ಮೇಳದಲ್ಲಿ ಭಾಗವಹಿಸಬಹುದು ಎಂದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ