ಸರ್ಕಾರದ ಸೌಲಭ್ಯ, ಯೋಜನೆ ಬಡಜನತೆಗೆ ತಲುಪಲಿ: ಸಚಿವ ಮಂಕಾಳ ವೈದ್ಯ

KannadaprabhaNewsNetwork |  
Published : Jun 06, 2025, 12:00 AM IST
ಪೊಟೋ ಪೈಲ್ : 5ಬಿಕೆಲ್5 | Kannada Prabha

ಸಾರಾಂಶ

ಬಳಿಕ ಶಾಸಕನಾಗಿ ಈಗ ಮಂತ್ರಿಯೂ ಆಗಿದ್ದೇನೆ. ನಿಮ್ಮ ಪ್ರೀತಿ, ಅಭಿಮಾನಗಳಿಗೆ ತಾನು ಚಿರಋಣಿಯಾಗಿದ್ದೇನೆ

ಭಟ್ಕಳ: ಸರ್ಕಾರದ ಎಲ್ಲ ಯೋಜನೆಗಳು ಮತ್ತು ಸೌಲಭ್ಯಗಳು ಬಡ ಜನತೆಗೆ ತಲುಪಬೇಕು. ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆತು, ಸಮಾಜದ ಕಟ್ಟಕಡೆಯ ವ್ಯಕ್ತಿಯೂ ನೆಮ್ಮದಿಯಿಂದ ಜೀವನ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು.

ಅವರು ಗುರುವಾರ ತಮ್ಮ ಜನ್ಮದಿನದ ಪ್ರಯುಕ್ತ ಇಡಗುಂಜಿ ಗಣಪತಿ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ತಮ್ಮ ಸ್ವಗೃಹದಲ್ಲಿ ಶುಭಾಶಯ ಸಲ್ಲಿಸಲು ಕಾಯುತ್ತಿದ್ದ ಅಭಿಮಾನಿಗಳು, ಕಾರ್ಯಕರ್ತರೊಂದಿಗೆ ಸರಳವಾಗಿ ಜನ್ಮದಿನ ಆಚರಿಸಿ ಮಾತನಾಡಿದರು. ಆರ್‌ಸಿಬಿ ವಿಜಯೋತ್ಸವದ ಸಮಯದಲ್ಲಿ ಸುಮಾರು 11 ಜನರು ಅಸುನೀಗಿದ್ದು ಇಂತಹ ಸಂದರ್ಭದಲ್ಲಿ ಯಾವುದೇ ಜನ್ಮದಿನ ಆಚರಿಸಬಾರದು ಎಂದು ನಿರ್ಧರಿಸಲಾಗಿತ್ತು. ದೇವರ ದರ್ಶನ ಪಡೆದು ಮನೆಗೆ ಬರುವಷ್ಟರಲ್ಲಿ ಸಾವಿರಾರು ಅಭಿಮಾನಿಗಳು ಕಾರ್ಯಕರ್ತರು ತನಗೆ ಆಶೀರ್ವದಿಸಲು, ಶುಭಾಶಯ ಹಂಚಿಕೊಳ್ಳಲು ನಿಂತುಕೊಂಡಿರುವುದನ್ನು ನೋಡಿ ಜನರ ಪ್ರೀತಿಗೆ ತಲೆಭಾಗ ಬೇಕಾಯಿತು. ನಾನು ಶಾಸಕನಾಗುತ್ತೇನೆ ಎಂದು ಯಾವಾಗಲೂ ಯೋಚಿಸಿರಲಿಲ್ಲ. ಅಚಾನಕ್ಕಾಗಿ ಈ ಅದೃಷ್ಟ ಒಲಿದು ಬಂದಿತ್ತು. ಬಳಿಕ ಶಾಸಕನಾಗಿ ಈಗ ಮಂತ್ರಿಯೂ ಆಗಿದ್ದೇನೆ. ನಿಮ್ಮ ಪ್ರೀತಿ, ಅಭಿಮಾನಗಳಿಗೆ ತಾನು ಚಿರಋಣಿಯಾಗಿದ್ದೇನೆ ಎಂದರು. ಕ್ಷೇತ್ರದಲ್ಲಿ ಯಾವುದೇ ವ್ಯಕ್ತಿ ಹಸಿವಿನಿಂದ, ವಿದ್ಯಾರ್ಥಿಗಳು ಶಿಕ್ಷಣದಿಂದ, ಯುವಕರು ನಿರುದ್ಯೋಗದಿಂದ ಅಲೆಯಬಾರದು. ಪ್ರವಾಸೋದ್ಯಮದ ಉನ್ನತೀಕರಣಕ್ಕಾಗಿ ಮುರ್ಡೇಶ್ವರದಲ್ಲಿ ಸುಮಾರು ₹400 ಕೋಟಿ ವೆಚ್ಚದಲ್ಲಿ ನೂತನ ಬಂದರು ನಿರ್ಮಾಣ ಕಾರ್ಯ ಶೀಘ್ರದಲ್ಲಿ ನೇರವೇರಲಿದೆ. ಇದರಿಂದ ಸ್ಥಳೀಯರಿಗೆ ಸ್ವಂತ ಉದ್ಯೋಗ ನಡೆಸಲು ಅವಕಾಶ ದೊರಯಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪತ್ನಿ ಪುಷ್ಪಲತಾ ವೈದ್ಯ, ಪುತ್ರಿ ಬೀನಾ ವೈದ್ಯ, ಸೋನಾಲಿ ವೈದ್ಯ ಮಂಕಾಳ ವೈದ್ಯರೊಂದಿಗೆ ಜನ್ಮದಿನದ ಆಚರಣೆಯಲ್ಲಿ ಪಾಲ್ಗೊಂಡರು. ಜಿಲ್ಲಾ ಮಟ್ಟದ ಅಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಸಚಿವರಿಗೆ ಶುಭ ಹಾರೈಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!