ಕನ್ನಡಪ್ರಭ ವಾರ್ತೆ ಜಗಳೂರು
ಮಂಗಳವಾರ ಸಂಜೆ ಪಟ್ಟಣದ ಕೃಷಿ ಇಲಾಖೆಗೆ ಆಗಮಿಸಿ ಅಧಿಕಾರಿಗಳಿಂದ ಗೊಬ್ಬರ ಅಭಾವ ಬಗ್ಗೆ ಮಾಹಿತಿ ಪಡೆದು, ರೈತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಯೂರಿಯಾ ಗೊಬ್ಬರದ ಸಮಸ್ಯೆ ತಾರಕಕ್ಕೇರಿದೆ. ರೈತರು ಊಟ, ನೀರು ಇಲ್ಲದೇ ಯೂರಿಯಾಕ್ಕಾಗಿ ಕಾಯುವಂಥ ದುಸ್ಥಿತಿ ಕಾಂಗ್ರೆಸ್ ಸರ್ಕಾರ ಮಾಡಿದೆ. ಪ್ರತಿನಿತ್ಯ ಟಿ.ವಿ.ಗಳಲ್ಲಿ ಜಗಳೂರು ರೈತರ ಸಮಸ್ಯೆ ವರದಿಯಾಗುತ್ತಿದೆ. ಉಸ್ತುವಾರಿ ಸಚಿವರು, ಶಾಸಕರು ರೈತರ ಸಮಸ್ಯೆಗಳ ಆಲಿಸುತ್ತಿಲ್ಲ. ಇನ್ನೆರಡು ದಿನಗಳಲ್ಲಿ ಸಮಸ್ಸೆಗಳನ್ನು ಬಗೆಹರಿಸದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಎದುರು ಪ್ರತಿಭಟನೆ, ಕೃಷಿ ಇಲಾಖೆ ಮುಂಭಾಗದಲ್ಲಿ ಮಾಜಿ ಶಾಸಕ ರಾಜೇಶ್ ನೇತೃತ್ವದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವ ಎಚ್ಚರಿಕೆ ನೀಡಿದರು.
ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ಮಾತನಾಡಿ, ಕೇಂದ್ರ ಸರ್ಕಾರ ಜಿಲ್ಲೆಗೆ ನಿಗದಿಯಂತೆ ೩೪ ಸಾವಿರ ಮೆಟ್ರಿಕ್ ಟನ್ ಯೂರಿಯಾ ಪೂರೈಸಬೇಕಾಗಿತ್ತು. ಆದರೆ ೩೮ ಸಾವಿರ ಮೆಟ್ರಿಕ್ ಟನ್ ಯೂರಿಯಾ ಸರಬರಾಜಗಿದೆ. ಇದನ್ನು ನೋಡಿದರೆ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಎಂಬ ಅನುಮಾನ ಕಾಡುತ್ತಿದೆ ಎಂದು ದೂರಿದರು.ರೈತರ ಸಮಸ್ಯೆ ಬಗೆಹರಿಸಿ:
ಸ್ಥಳಕ್ಕೆ ಕೃಷಿ ಅಧಿಕಾರಿ:
ಈ ವೇಳೆ ದಾವಣಗೆರೆ ಕೃಷಿ ಇಲಾಖೆ ಉಪ ಕೃಷಿ ನಿರ್ದೇಶಕ ಅಶೋಕ ಎಸ್., ಡಿವೈಎಸ್ಪಿ ಬಸವರಾಜಪ್ಪ, ತಹಸೀಲ್ದಾರ್ ಸೈಯದ್ ಕಲೀಂ ಉಲ್ಲಾ, ಪಿಐ ಸಿದ್ದರಾಮಯ್ಯ, ಜಗಳೂರು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ವೇತಾ, ಉಭಯ ಬಣದ ರೈತ ಸಂಘಟನೆಗಳ ಅಧ್ಯಕ್ಷರು, ರೈತರು, ಪಟ್ಟಣ ಪಂಚಾಯಿತಿ ಅಧ್ಯಕ್ಷ ನವೀನ್ಕುಮಾರ್, ಪಪಂ ಸದಸ್ಯ ಸಿದ್ದಪ್ಪ, ಮುಖಂಡರಾದ ಜೆ.ವಿ. ನಾಗರಾಜ್, ಬಿಸ್ತುವಳ್ಳಿ ಬಾಬು, ಬಿದರಕೆರೆ ರವಿ, ಕ್ಯಾಂಪ್ ಓಬಳೇಶ್ ಮತ್ತಿತರರು ಹಾಜರಿದ್ದರು.
- - --೨೯ಜೆಜಿಎಲ್೦೧: ಜಗಳೂರಲ್ಲಿ ಮಂಗಳವಾರ ಕೃಷಿ ಇಲಾಖೆ ಮುಂಭಾಗ ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್ ಮಾತನಾಡಿದರು.