ಗೊಬ್ಬರ ಪೂರೈಕೆಯಲ್ಲಿ ಸರ್ಕಾರ ವಿಫಲ-ವೀರಬಸಪ್ಪ ಹೂಗಾರ

KannadaprabhaNewsNetwork |  
Published : Aug 08, 2025, 01:03 AM IST
(7ಎನ್.ಆರ್.ಡಿ3 ಮಹದಾಯಿ ಹೋರಾಟ ವೇದಿಕೆಯಲ್ಲಿ ರೈತ ಮುಖಂಡ ವೀರಭಸಪ್ಪ ಹೂಗಾರ ಮಾತನಾಡುತ್ತಿದ್ದಾರೆ.)  | Kannada Prabha

ಸಾರಾಂಶ

ಪ್ರತಿ ದಿನ ರೈತ ಸಮುದಾಯ ಯೂರಿಯಾ ಗೊಬ್ಬರ ಖರೀದಿಗಾಗಿ ಅಲೆದಾಡಿದರೂ ಸಹ ರಾಜ್ಯ ಹಾಗೂ ಕೇಂದ್ರ ಸರ್ಕಾರ ರೈತರಿಗೆ ಗೊಬ್ಬರ ಪೂರೈಕೆ ಮಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಗಂಭೀರ ಆರೋಪ ಮಾಡಿದರು.

ನರಗುಂದ: ಪ್ರತಿ ದಿನ ರೈತ ಸಮುದಾಯ ಯೂರಿಯಾ ಗೊಬ್ಬರ ಖರೀದಿಗಾಗಿ ಅಲೆದಾಡಿದರೂ ಸಹ ರಾಜ್ಯ ಹಾಗೂ ಕೇಂದ್ರ ಸರ್ಕಾರ ರೈತರಿಗೆ ಗೊಬ್ಬರ ಪೂರೈಕೆ ಮಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಗಂಭೀರ ಆರೋಪ ಮಾಡಿದರು.

ಅವರು ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ ವೇದಿಕೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಲಕ್ಷಾಂತರ ಹೆಕ್ಟೇರ್‌ ಪ್ರದೇಶದಲ್ಲಿ ವಾಣಿಜ್ಯ ಬೆಳೆಗಳಾದ ಗೋವಿನ ಜೋಳ, ಬಿಟಿ ಹತ್ತಿ, ಈರಳ್ಳಿ ಸೇರಿದಂತೆ ಇತರೆ ಬೆಳೆ ಬಿತ್ತನೆ ಮಾಡಿದ್ದಾರೆ. ಸದ್ಯ ಈ ಎಲ್ಲ ಬೆಳೆಗಳಿಗೆ ಯೂರಿಯಾ ಗೊಬ್ಬರ ನೀಡುವುದು ಅವಶ್ಯವಿದೆ. ಇಂತಹ ಸಮಯದಲ್ಲಿ ಸರ್ಕಾರ ಅಲ್ಪಸ್ವಲ್ಪ ಗೊಬ್ಬರ ಪೂರೈಕೆ ಮಾಡಿ ಅನ್ನದಾತರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.

ಪ್ರತಿ ತಾಲೂಕಿನ ಕೃಷಿ ಇಲಾಖೆಯಿಂದ ಸರ್ಕಾರ ಪ್ರಸಕ್ತ ವರ್ಷ ಯಾವ ಯಾವ ಬೆಳೆ ಬಿತ್ತನೆ ಮಾಡಲಾಗುವದೆಂದು ಗುರಿಯ ಕ್ರಿಯಾ ಯೋಜನೆಯ ವರದಿ ಪಡೆದುಕೊಂಡಿರುತ್ತದೆ. ಇದರ ಪ್ರಕಾರ ಸರ್ಕಾರ ಏಕೆ ಮೊದಲೆ ರಾಸಾಯನಿಕ ಗೊಬ್ಬರ ಸಂಗ್ರಹ ಮಾಡಿಕೊಂಡಿಲ್ಲವೆಂದು ಪ್ರಶ್ನೆ ಮಾಡಿದರು. ಕಳೆದೊಂದು ತಿಂಗಳಿಂದ ರಾಜ್ಯದ ರೈತರು ಯೂರಿಯಾ ಗೊಬ್ಬರಕ್ಕಾಗಿ ಪ್ರತಿ ದಿನ ಖಾಸಗಿ ಗೊಬ್ಬರ ಅಂಗಡಿ ಮತ್ತು ಸಹಕಾರಿ ಸಂಘಗಳಿಗೆ ಗೊಬ್ಬರ ಖರೀದಿ ಮಾಡಲು ಅಲೆದಾಡಿದರೂ ಕೂಡ ಗೊಬ್ಬರ ಸಿಗದೆ ರೈತರು ಬಿತ್ತನೆ ಮಾಡಿದ ಬೆಳೆಗಳು ಹಾಳಾಗುತ್ತಿವೆ. ಆದರೆ ಉಭಯ ಸರ್ಕಾರಗಳು ರಾಜ್ಯದಲ್ಲಿ ಏನು ಸಮಸ್ಯೆ ಇಲ್ಲವೆಂದು ನಾಟಕವಾಡುತ್ತಿವೆ ಎಂದರು.

ಸರ್ಕಾರಕ್ಕೆ ಈಗಲು ಕಾಲ ಮಿಂಚಿಲ್ಲ, ರಾಜ್ಯ ರೈತರ ಬೇಡಿಕೆ ಅನುಸಾರ ಯೂರಿಯಾ ಗೊಬ್ಬರ ಪೂರೈಕೆ ಮಾಡದಿದ್ದರೆ, ಮುಂದಿನ ದಿನಗಳಲ್ಲಿ ರಾಜ್ಯದ ರೈತರು ಬೆಂಗಳೂರ ವಿಧಾನ ಸೌಧಕ್ಕೆ ಮುತ್ತಿಗೆ ಹಾಕುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಎಚ್ಚರಿಸಿದರು.

ಪರಶುರಾಮ ಜಂಬಗಿ, ಎಸ್.ಬಿ. ಜೋಗಣ್ಣವರ, ಸಿ.ಎಸ್. ಪಾಟೀಲ, ಹನಮಂತ ಸರನಾಯ್ಕರ, ಸುಭಾಸ ಗಿರಿಯಣ್ಣವರ, ಮಲ್ಲೇಶ ಅಣ್ಣಿಗೇರಿ, ಶಿವಪ್ಪ ಸಾತಣ್ಣವರ, ಶಂಕ್ರಪ್ಪ ಜಾಧವ, ಫಕೀರಪ್ಪ ಅಣ್ಣಿಗೇರಿ, ಅರ್ಜುನ ಮಾನೆ, ಅನಸವ್ವ ಶಿಂದೆ, ನಾಗರತ್ನ ಸವಳಭಾವಿ, ವಾಸು ಚವ್ಹಾಣ, ವಿಜಯಕುಮಾರ ಹೂಗಾರ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆ ಕೋರಿಕೆ : ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ