ಕನ್ನಡಪ್ರಭ ವಾರ್ತೆ ಚನ್ನಗಿರಿ
ಪಟ್ಟಣದ ಬಸವ ಚೇತನ ಎಜುಕೇರ್ ಶಾಲೆಯ ಆವರಣದಲ್ಲಿ ಬಂಧುತ್ವ ಫೌಂಡೇಷನ್ ವತಿಯಿಂದ ಈಜಿ-ಪೀಜಿ ಕ್ಲಾಸಸ್ನ ಸಹಯೋಗದೊಂದಿಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ನವೋದಯ, ಮೊರಾರ್ಜಿ, ಸೈನಿಕ ಮತ್ತು ಇತರೆ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳಿಗೆ ತೇಜಸ್ವಿ ವಿ.ಪಟೇಲ್ ಎಜುಕೇಷನ್ ಪ್ರೋಗ್ರಾಂ ಹೆಸರಿನಲ್ಲಿ ಉಚಿತ ಆನ್ಲೈನ್ ತರಬೇತಿಯ ಲೋಕಾರ್ಪಣೆ ಕಾರ್ಯಕ್ರಮ ಮತ್ತು ಬಸವ ಚೇತನ ಎಜುಕೇರ್ನ ಡಿಜಿಟಲ್ ಕೊಠಡಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ಬಡ ಮತ್ತು ಕೂಲಿ ಕಾರ್ಮಿಕರ ಮಕ್ಕಳೇ ಹೆಚ್ಚಾಗಿ ಓದುತ್ತಿದ್ದು ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ನಮ್ಮ ಸರ್ಕಾರಗಳು ಮುಗ್ಗರಿಸಿವೆ ಎಂದರು.
ಕೇಂದ್ರ ಸರ್ಕಾರದ ವತಿಯಿಂದ ನಡೆಯುತ್ತಿರುವ ನವೋದಯ ಶಾಲೆಗಳ ಮಾದರಿಯಲ್ಲಿ ಶಿಕ್ಷಣ ವನ್ನು ನೀಡುವ ಉದ್ದೇಶದಿಂದ ಈ ಕ್ಷೇತ್ರದಿಂದ ಶಾಸಕರಾಗಿ ಮುಖ್ಯಮಂತ್ರಿಗಳಾಗಿದ್ದ ಜೆ.ಎಚ್.ಪಟೇಲರು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಿದರು ಎಂದು ತಿಳಿಸುತ್ತಾ ಪ್ರಸ್ತುತ ಶಿಕ್ಷಣ ಶ್ರೀಮಂತರ ಪಾಲಾಗುತ್ತಿದ್ದು ಶಿಕ್ಷಣ ಕ್ಷೇತ್ರದಲ್ಲಿ ಸಮಾನತೆ ಬರಬೇಕಾಗಿದೆ ಎಂದರು.ಸರ್ಕಾರ ಮತ್ತು ಸಮಾಜದ ವೈಪಲ್ಯದಿಂದ ಸರ್ಕಾರಿ ಶಾಲೆಗಳು ನಲುಗಿಹೋಗುತ್ತಿದ್ದು ನಮ್ಮ ಪೋಷಕರುಗಳು ಸಹಾ ಸರ್ಕಾರಿಶಾಲೆಗಳು ಎಂದರೆ ತಾತ್ಸಾರದಿಂದ ನೋಡುವುದನ್ನು ಬಿಡಬೇಕು ಎಂದರು.
ಬಡತನ ಇದೆ ಎಂದು ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ದಿಂದ ವಂಚಿತರನ್ನಾಗಿ ಮಾಡದೆ ಬಡತನದ ಮಧ್ಯೆಯೂ ಉನ್ನತ ಶಿಕ್ಷಣವನ್ನು ನಿಮ್ಮ ಮಕ್ಕಳಿಗೆ ನೀಡಿದರೆ ನಿಮ್ಮ ಮಕ್ಕಳು ಸಮಾಜದ ಆಸ್ತಿಗಳಾಗುತ್ತಾರೆ ಎಂದರು.