ಕುಷ್ಟಗಿ: ಬರಪೀಡಿತ ತಾಲೂಕುಗಳ ಘೋಷಣೆಯಲ್ಲಿ ಸರ್ಕಾರ ಸರಿಯಾದ ಕ್ರಮ ಕೈಗೊಂಡಿಲ್ಲ. ಗುಳೆ ಹೋದ ಹಾಗೂ ಬೆಳೆ ಹಾಳಾದ ತಾಲೂಕುಗಳನ್ನೂ ಪಟ್ಟಿಯಿಂದ ಕೈಬಿಡಲಾಗಿದೆ. ಬರದಿಂದ ಸಂಕಷ್ಟಕ್ಕೀಡಾದ ರೈತರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.
ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, ಕುಷ್ಟಗಿ–ಬೆಂಗಳೂರು ನಡುವೆ ರೈಲು ಸೇವೆ ಆರಂಭಿಸುವ ಬೇಡಿಕೆ ಬಹುದಿನಗಳಿಂದ ಇದೆ. ಈ ಕುರಿತು ರೈಲ್ವೆ ಸಚಿವ ವಿ.ಸೋಮಣ್ಣ ಅವರ ಗಮನಕ್ಕೂ ತರಲಾಗಿದೆ. ಕೇಂದ್ರ ರೈಲ್ವೆ ಸಚಿವರ ಗಮನಕ್ಕೆ ತಂದು ಕುಷ್ಟಗಿಗೆ ಬೆಂಗಳೂರು ರೈಲು ಸಂಪರ್ಕ ಕಲ್ಪಿಸಲು ಎಲ್ಲ ರೀತಿಯ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಶಾಸಕ ದೊಡ್ಡನಗೌಡ ಪಾಟೀಲ್ ಮಾತನಾಡಿ, ಕುಷ್ಟಗಿ ತಾಲೂಕನ್ನು ಬರಪೀಡಿತ ಎಂದು ಘೋಷಿಸುವಲ್ಲಿ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಮುಂದಿನ ಎರಡನೇ ಪಟ್ಟಿಯಲ್ಲಿ ಕುಷ್ಟಗಿಯನ್ನು ಬರಪೀಡಿತ ತಾಲೂಕು ಎಂದು ಘೋಷಿಸುವುದಾಗಿ ಭರವಸೆ ನೀಡಿದ್ದಾರೆ. ತಪ್ಪಿದರೆ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಹಗರಣ ಸೇರಿದಂತೆ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿರುವ ಅನುದಾನದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಅಥವಾ ದುರ್ಬಳಕೆ ನಡೆದರೆ ಬಿಜೆಪಿ ಸುಮ್ಮನೆ ಕೂರುವುದಿಲ್ಲ. ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ತಿಳಿಸಿದ್ದಾರೆ.