ಕನ್ನಡಪ್ರಭ ವಾರ್ತೆ ಹಾಸನ
ವಿಲೀನ ಮಾಡಲಿ: ಕೂಡಲೇ ಸರ್ಕಾರ ಕಾಯಂ ಅಥವಾ ಅರೆಕಾಲಿಕ ಬೋಧಕ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು. ಸ್ವಾತಂತ್ರ್ಯ ಬಂದು ೭೫ ವರ್ಷ ಕಳೆದರೂ ಬಡ ಮಕ್ಕಳಿಗೆ ಶಿಕ್ಷಣ ನೀಡಲು ಆಗದಿದ್ದರೆ ಹೇಗೆ ಎಂದು ಪ್ರಶ್ನಿಸಿದರು. ಮಕ್ಕಳಿಗೆ ಶಿಕ್ಷಣ ನೀಡಲು ಆಗದಿದ್ದರೆ ಖಾಸಗಿ ಶಾಲೆಗಳ ಜೊತೆ ಸರ್ಕಾರಿ ಶಾಲೆಗಳನ್ನು ವಿಲೀನ ಮಾಡಲಿ. ಎಲ್ಲಾ ಸರ್ಕಾರಿ ಕಾಲೇಜುಗಳನ್ನು ಖಾಸಗೀಕರಣ ಮಾಡಲಿ. ರಾಜ್ಯ ಸರಕಾರವು ತನ್ನ ಗ್ಯಾರಂಟಿಗಾಗಿ ಸರ್ಕಾರಿ ಶಾಲೆಯನ್ನು ಉಳಿಸುವುದಕ್ಕೆ ಆಗುವುದಿಲ್ಲ. ದಯಮಾಡಿ ಖಾಸಗಿ ಶಾಲೆಗೆ ಹೋಗಿ ಎಂದು ಹೇಳಿಬಿಡಿ ಎಂದು ಬೇಸರದಲ್ಲಿ ಹೇಳಿದರು.
ಶಿಕ್ಷಣ ಕೊಡಿ: ಈ ಸರ್ಕಾರಕ್ಕೆ ನಾಚಿಕೆ ಆಗಬೇಕು. ವರ್ಗಾವಣೆ ದಂಧೆ ಏನಾದರೂ ಮಾಡಿಕೊಂಡು ಹಾಳುಬಿದ್ದು ಹೋಗಲಿ. ನಾನು ಬಡವರ ಮಕ್ಕಳಿಗೆ ಒಂದು ಉತ್ತಮವಾದ ಶಿಕ್ಷಣ ಕೊಡಿ ಎಂದು ಮನವಿ ಮಾಡುತ್ತೇನೆ. ಹೊಳೆನರಸೀಪುರದ ಕಾಲೇಜಿಗ ಬಂದ ಹಣವನ್ನು ಅರಸೀಕೆರೆಗೆ ವರ್ಗಾಯಿಸಿಕೊಂಡಿದ್ದಾರೆ. ಈಗಾಗಲೇ ಅರಸೀಕೆರೆಗೆ ೨ ಕೋಟಿ ಬಂದಿದ್ದರೂ ಸಾಕಾಗುವುದಿಲ್ಲ ಎಂದು ಈ ೭೫ ಲಕ್ಷವನ್ನು ವರ್ಗಾಯಿಸಿಕೊಂಡಿದ್ದಾರೆ. ಇನ್ನೂ ಮೂರು ವರ್ಷಗಳ ಕಾಲ ತಡೆದುಕೊಳ್ಳುತ್ತೇನೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡರ ಹೆಸರು ಹೇಳದೇ ಆಕ್ರೋಶ ವ್ಯಕ್ತಪಡಿಸಿದರು.ಪರಿಹಾರ ನೀಡಿಲ್ಲ: ಹೆಚ್ಚಿನ ಮಳೆಯಿಂದ ಹಾಸನ ಜಿಲ್ಲೆಯಲ್ಲಿ ಸಾಕಷ್ಟು ಮನೆಗಳು ಬಿದ್ದುಹೋಗಿವೆ. ಆದರೆ ಇದುವರೆಗೂ ಮನೆಯಗಳಿಗೆ ಪರಿಹಾರ ನೀಡಿಲ್ಲ. ಅಲ್ಲದೆ ಕೇವಲ ಒಂದು ಲಕ್ಷ ಪರಿಹಾರ ನೀಡಲು ಸರ್ಕಾರ ಮುಂದಾಗಿದ್ದು, ಒಂದು ಲಕ್ಷದಿಂದ ಬಡವರ ತಮ್ಮ ಮನೆ ಕಟ್ಟಿಕೊಳ್ಳಲು ಸಾಧ್ಯಾನಾ ಎಂದು ಪ್ರಶ್ನೆ ಮಾಡಿದರು. ಪೂರ್ತಿ ಮನೆ ಬಿದ್ದರೇ ೧ ಲಕ್ಷದ ೨೦ ಸಾವಿರವಂತೆ. ಇದರಿಂದ ಅಡಿಪಾಯ ಹಾಕಲು ಸಾಧ್ಯವೇ! ಕನಿಷ್ಠ ೫ ಲಕ್ಷ ಪರಿಹಾರ ನೀಡಿದರೆ ಬಿದ್ದು ಹೋಗಿರುವ ಮನೆ ಕಟ್ಟಿಕೊಳ್ಳಲು ಅನುಕೂಲವಾಗಲಿದೆ. ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಮೂರು ಲಕ್ಷ ಪರಿಹಾರ ನೀಡಿದರು. ಆದರೆ ಕಾಂಗ್ರೆಸ್ ಸರ್ಕಾರ ಅದನ್ನು ಒಂದು ಲಕ್ಷಕ್ಕೆ ಇಳಿಸಿದೆ ಎಂದು ತಮ್ಮ ಸಮಾಧಾನ ವ್ಯಕ್ತಪಡಿಸಿದರು.
ಇನ್ನು ಎತ್ತಿನಹೊಳೆ ಯೋಜನ ವಿಚಾರವಾಗಿ ಮಾತನಾಡಿ, ಎತ್ತಿನಹೊಳೆ ಪರಿಸ್ಥಿತಿ ಏನಾಗಿದೆ ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಜೊತೆಗೆ ಜಿಲ್ಲಾ ಪಂಚಾಯತ್ ಅಧಿಕಾರಿಗಳ ವಶದಲ್ಲಿದೆ. ಅವರು ತಮ್ಮ ಮನಸ್ಸಿಗೆ ಬಂದಂತೆ ಆಡಳಿತ ನಡೆಸುತ್ತಿದ್ದಾರೆ. ಈ ಎಲ್ಲ ವಿಚಾರಗಳ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಎಂದರು.